ನವದೆಹಲಿ, ಜ. 4– ಲೋಕಸಭೆಗೆ ನಡೆಯುವ ಮಧ್ಯಕಾಲೀನ ಚುನಾವಣೆಗಳಲ್ಲಿ ಸರ್ಕಾರವು ಅಧಿಕಾರ ದುರುಪಯೋಗಪಡಿಸಿಕೊಳ್ಳದಂತೆ ತುರ್ತುಕ್ರಮ ತೆಗೆದುಕೊಳ್ಳಬೇಕೆಂದು ಸಂಸ್ಥಾ ಕಾಂಗ್ರೆಸ್, ಜನಸಂಘ, ಎಸ್.ಎಸ್.ಪಿ ಮತ್ತು ಸ್ವತಂತ್ರ ಪಕ್ಷದ ನಾಯಕರು ಇಂದು ರಾಷ್ಟ್ರಪತಿ ಶ್ರೀ ವಿ.ವಿ.ಗಿರಿ ಅವರನ್ನು ಭೇಟಿ ಮಾಡಿ ಒತ್ತಾಯ ಹಾಕಿದರು.