<p><strong>ಒತ್ತೆಯಾಳು ಬಿಡುಗಡೆಗೆಪಾಕ್ ‘ದೂತ’</strong></p>.<p><strong>ನವದೆಹಲಿ, ಜುಲೈ 19 (ಯುಎನ್ಐ)–</strong> ವಿದೇಶಿ ಒತ್ತೆಯಾಳುಗಳ ಬಿಡುಗಡೆಗಾಗಿ ಅಲ್ ಫರಾನ್ ಭಯೋತ್ಪಾದಕ ಗುಂಪಿನ ಮನವೊಲಿಸುವಂತೆ ಪಾಕಿಸ್ತಾನದ ಜಮಾತ್– ಉಲ್– ಉಲೇಮಾ ನಾಯಕ ಫಜ್ಲುರ್ ರೆಹಮಾನ್ ಅವರನ್ನು ಅಮೆರಿಕ ಹಾಗೂ ಬ್ರಿಟನ್ಗಳು ಕೋರಿದ್ದು, ರೆಹಮಾನ್ ಅವರು ಭಾರತಕ್ಕೆ ಬರಲು ಭಾರತ ಸರ್ಕಾರ ವೀಸಾ ನೀಡಿದೆ.</p>.<p>ರೆಹಮಾನ್ ಅವರು ಎಂದು ಬರುವರು ಎಂಬುದು ಖಚಿತವಾಗಿಲ್ಲ. ವೀಸಾ ನೀಡಿರುವ ವಿಷಯವನ್ನು ವಿದೇಶಾಂಗ ಖಾತೆಯ ವಕ್ತಾರರು ಇಂದು ತಿಳಿಸಿದರು. ರೆಹಮಾನ್ ಅವರದ್ದು ಖಾಸಗಿ ಭೇಟಿಯಾಗಿರುತ್ತದೆ ಎಂದರು.</p>.<p><strong>ನೋವಿನಲ್ಲೂ ನಗಿಸಿದ ‘ಅಭಿಮಾನಿ’ ಬಾಲಣ್ಣ ಕಣ್ಮರೆ</strong></p>.<p><strong>ಬೆಂಗಳೂರು, ಜುಲೈ 19–</strong> ಹಲವಾರು ದಶಕಗಳ ಕಾಲ ಕನ್ನಡದ ಪ್ರೇಕ್ಷಕರನ್ನು ನಗಿಸಿ, ರಂಜಿಸಿದ ಕನ್ನಡ ಚಿತ್ರರಂಗದ ಖ್ಯಾತ ನಟ ಟಿ.ಎನ್.ಬಾಲಕೃಷ್ಣ ಇನ್ನಿಲ್ಲ.</p>.<p>ವೈವಿಧ್ಯಮಯ ಪಾತ್ರಗಳಿಂದ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಕನ್ನಡ ಕಲಾಪ್ರೇಮಿಗಳನ್ನು ರಂಜಿಸಿದ ಬಾಲಕೃಷ್ಣ ಇಂದು ರಾತ್ರಿ ಇಲ್ಲಿ ನಿಧನರಾದರು.</p>.<p>‘ಬಾಲಣ್ಣ’ ಎಂದೇ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಿದ್ದ ಬಾಲಕೃಷ್ಣ ಕಳೆದ ಕೆಲವು ದಿನಗಳಿಂದ ಶ್ವಾಸಕೋಶ ಕ್ಯಾನ್ಸರ್ನಿಂದ ನರಳುತ್ತಿದ್ದು, ಚಿತ್ರರಂಗಕ್ಕೆ ವಿದಾಯ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಒತ್ತೆಯಾಳು ಬಿಡುಗಡೆಗೆಪಾಕ್ ‘ದೂತ’</strong></p>.<p><strong>ನವದೆಹಲಿ, ಜುಲೈ 19 (ಯುಎನ್ಐ)–</strong> ವಿದೇಶಿ ಒತ್ತೆಯಾಳುಗಳ ಬಿಡುಗಡೆಗಾಗಿ ಅಲ್ ಫರಾನ್ ಭಯೋತ್ಪಾದಕ ಗುಂಪಿನ ಮನವೊಲಿಸುವಂತೆ ಪಾಕಿಸ್ತಾನದ ಜಮಾತ್– ಉಲ್– ಉಲೇಮಾ ನಾಯಕ ಫಜ್ಲುರ್ ರೆಹಮಾನ್ ಅವರನ್ನು ಅಮೆರಿಕ ಹಾಗೂ ಬ್ರಿಟನ್ಗಳು ಕೋರಿದ್ದು, ರೆಹಮಾನ್ ಅವರು ಭಾರತಕ್ಕೆ ಬರಲು ಭಾರತ ಸರ್ಕಾರ ವೀಸಾ ನೀಡಿದೆ.</p>.<p>ರೆಹಮಾನ್ ಅವರು ಎಂದು ಬರುವರು ಎಂಬುದು ಖಚಿತವಾಗಿಲ್ಲ. ವೀಸಾ ನೀಡಿರುವ ವಿಷಯವನ್ನು ವಿದೇಶಾಂಗ ಖಾತೆಯ ವಕ್ತಾರರು ಇಂದು ತಿಳಿಸಿದರು. ರೆಹಮಾನ್ ಅವರದ್ದು ಖಾಸಗಿ ಭೇಟಿಯಾಗಿರುತ್ತದೆ ಎಂದರು.</p>.<p><strong>ನೋವಿನಲ್ಲೂ ನಗಿಸಿದ ‘ಅಭಿಮಾನಿ’ ಬಾಲಣ್ಣ ಕಣ್ಮರೆ</strong></p>.<p><strong>ಬೆಂಗಳೂರು, ಜುಲೈ 19–</strong> ಹಲವಾರು ದಶಕಗಳ ಕಾಲ ಕನ್ನಡದ ಪ್ರೇಕ್ಷಕರನ್ನು ನಗಿಸಿ, ರಂಜಿಸಿದ ಕನ್ನಡ ಚಿತ್ರರಂಗದ ಖ್ಯಾತ ನಟ ಟಿ.ಎನ್.ಬಾಲಕೃಷ್ಣ ಇನ್ನಿಲ್ಲ.</p>.<p>ವೈವಿಧ್ಯಮಯ ಪಾತ್ರಗಳಿಂದ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಕನ್ನಡ ಕಲಾಪ್ರೇಮಿಗಳನ್ನು ರಂಜಿಸಿದ ಬಾಲಕೃಷ್ಣ ಇಂದು ರಾತ್ರಿ ಇಲ್ಲಿ ನಿಧನರಾದರು.</p>.<p>‘ಬಾಲಣ್ಣ’ ಎಂದೇ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಿದ್ದ ಬಾಲಕೃಷ್ಣ ಕಳೆದ ಕೆಲವು ದಿನಗಳಿಂದ ಶ್ವಾಸಕೋಶ ಕ್ಯಾನ್ಸರ್ನಿಂದ ನರಳುತ್ತಿದ್ದು, ಚಿತ್ರರಂಗಕ್ಕೆ ವಿದಾಯ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>