<p><strong>ಗುತ್ತಿಗೆ ವೈದ್ಯ ಸಿಬ್ಬಂದಿಯ ಸೇವೆ ಕಾಯಂ: ಮಾಲಕರೆಡ್ಡಿ</strong></p>.<p>ಶಿವಮೊಗ್ಗ, ಮೇ 11– ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು 3 ವರ್ಷಗಳ ಕಾಲ ಚೆನ್ನಾಗಿ ಕಾರ್ಯ ನಿರ್ವಹಿಸುವ ವೈದ್ಯ ಸಿಬ್ಬಂದಿಯ ಸೇವೆಯನ್ನು ಕಾಯಂ ಮಾಡಲಾಗುವುದು ಎಂದು<br>ಆರೋಗ್ಯ ಸಚಿವ ಡಾ. ಎ.ಬಿ. ಮಾಲಕರೆಡ್ಡಿ ತಿಳಿಸಿದರು.</p>.<p>ಕರ್ನಾಟಕ ರಾಜ್ಯದ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರ ಸಂಘವು ಏರ್ಪಡಿಸಿದ್ದ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರ ರಾಜ್ಯಮಟ್ಟದ ಪ್ರಥಮ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯಮಟ್ಟದಲ್ಲಿ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನೇಮಕಾತಿ ಪ್ರಕ್ರಿಯೆ ತುಂಬ ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆಯನ್ನು ವಿಕೇಂದ್ರೀಕರಣಗೊಳಿಸಿ ಜಿಲ್ಲಾಮಟ್ಟದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದರು.</p>.<p><strong>ಹಿಳ್ಳಿ ಬ್ಯಾರೇಜ್ವರೆಗೆ ಭೀಮಾ ನೀರು: ಮಹಾರಾಷ್ಟ್ರ ಭರವಸೆ</strong></p>.<p>ವಿಜಾಪುರ, ಮೇ 11– ಮಹಾರಾಷ್ಟ್ರ ಸರ್ಕಾರ ಉಜಿನಿ ಅಣೆಕಟ್ಟೆಯಿಂದ ಭೀಮಾ ನದಿಗೆ ಬಿಟ್ಟಿರುವ ನೀರನ್ನು<br>ಹಿಳ್ಳಿ ಬ್ಯಾರೇಜ್ವರೆಗೆ ಮಾತ್ರ ಹರಿಸ<br>ಲಾಗುವುದು ಎಂದು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲಾ ಉಸ್ತುವಾರಿ ಸಚಿವ ಆನಂದರಾವ್ ದೇವಕತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುತ್ತಿಗೆ ವೈದ್ಯ ಸಿಬ್ಬಂದಿಯ ಸೇವೆ ಕಾಯಂ: ಮಾಲಕರೆಡ್ಡಿ</strong></p>.<p>ಶಿವಮೊಗ್ಗ, ಮೇ 11– ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು 3 ವರ್ಷಗಳ ಕಾಲ ಚೆನ್ನಾಗಿ ಕಾರ್ಯ ನಿರ್ವಹಿಸುವ ವೈದ್ಯ ಸಿಬ್ಬಂದಿಯ ಸೇವೆಯನ್ನು ಕಾಯಂ ಮಾಡಲಾಗುವುದು ಎಂದು<br>ಆರೋಗ್ಯ ಸಚಿವ ಡಾ. ಎ.ಬಿ. ಮಾಲಕರೆಡ್ಡಿ ತಿಳಿಸಿದರು.</p>.<p>ಕರ್ನಾಟಕ ರಾಜ್ಯದ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರ ಸಂಘವು ಏರ್ಪಡಿಸಿದ್ದ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರ ರಾಜ್ಯಮಟ್ಟದ ಪ್ರಥಮ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯಮಟ್ಟದಲ್ಲಿ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನೇಮಕಾತಿ ಪ್ರಕ್ರಿಯೆ ತುಂಬ ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆಯನ್ನು ವಿಕೇಂದ್ರೀಕರಣಗೊಳಿಸಿ ಜಿಲ್ಲಾಮಟ್ಟದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದರು.</p>.<p><strong>ಹಿಳ್ಳಿ ಬ್ಯಾರೇಜ್ವರೆಗೆ ಭೀಮಾ ನೀರು: ಮಹಾರಾಷ್ಟ್ರ ಭರವಸೆ</strong></p>.<p>ವಿಜಾಪುರ, ಮೇ 11– ಮಹಾರಾಷ್ಟ್ರ ಸರ್ಕಾರ ಉಜಿನಿ ಅಣೆಕಟ್ಟೆಯಿಂದ ಭೀಮಾ ನದಿಗೆ ಬಿಟ್ಟಿರುವ ನೀರನ್ನು<br>ಹಿಳ್ಳಿ ಬ್ಯಾರೇಜ್ವರೆಗೆ ಮಾತ್ರ ಹರಿಸ<br>ಲಾಗುವುದು ಎಂದು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲಾ ಉಸ್ತುವಾರಿ ಸಚಿವ ಆನಂದರಾವ್ ದೇವಕತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>