<p>25 ವರ್ಷಗಳ ಹಿಂದೆ; ಭಾನುವಾರ, 15–4–2001</p>.<p>ಬೆಂಗಳೂರು, ಏ. 14– ಬೆಂಗಳೂರಿನ ನೂರು ದಿನಸಿ ಅಂಗಡಿಗಳಲ್ಲಿ ಚಿಲ್ಲರೆಯಾಗಿ ಬಿಯರ್ ಮಾರಾಟ ಮಾಡುವುದಕ್ಕೆ ಅನುಮತಿ ನೀಡಲು ನಿರ್ಧರಿಸಿದ್ದ ರಾಜ್ಯ ಸರ್ಕಾರ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವಾದ ಇಂದು ತನ್ನ ಉದ್ದೇಶಿತ ಪ್ರಸ್ತಾವವನ್ನು ಹಿಂತೆಗೆದುಕೊಂಡಿತು.</p>.<p>ವಿಧಾನಸೌಧದ ಮುಂಭಾಗದಲ್ಲಿ ಸಂಜೆ ಹಮ್ಮಿಕೊಂಡಿದ್ದ ಬಿ.ಆರ್. ಅಂಬೇಡ್ಕರ್ ಅವರ 110ನೇ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಜನಸಾಮಾನ್ಯರಿಂದ ವಿಶೇಷವಾಗಿ ಮಹಿಳೆಯರಿಂದ ಈ ಬಗ್ಗೆ ವ್ಯಾಪಕ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹತ್ವದ ದಿನವಾದ ಇಂದು ಬಿಯರ್ ಮಾರಾಟಕ್ಕೆ ಅನುಮತಿ ನೀಡುವ ಪ್ರಸ್ತಾವವನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ಪ್ರಕಟಿಸಿದರು.</p>.<p><strong>ರಾಜ್ಯಕ್ಕೆ ಕೇಂದ್ರದ 100 ಮೆ.ವಾ. ಹೆಚ್ಚುವರಿ ವಿದ್ಯುತ್</strong></p>.<p>ಬೆಂಗಳೂರು, ಏ. 14– ಕೇಂದ್ರದಿಂದ ಈಗ ರಾಜ್ಯಕ್ಕೆ ಪೂರೈಕೆಯಾಗುತ್ತಿರುವ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ 100 ಮೆಗಾವಾಟ್ ವಿದ್ಯುತ್ ಪೂರೈಸಲಾಗುವುದು ಎಂದು ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ ಜಯವಂತಿ ಮೆಹತಾ ಇಂದು ಇಲ್ಲಿ ಪ್ರಕಟಿಸಿದರು.</p>.<p>ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, ಕರ್ನಾಟಕವನ್ನು ನಾವು ಕತ್ತಲಲ್ಲಿ ಇಡುವುದಿಲ್ಲ. ಸಾಧ್ಯವಾದಷ್ಟು ಬೇಗನೆ ಹೆಚ್ಚುವರಿಯಾಗಿ 100 ಮೆ.ವಾ. ವಿದ್ಯುತ್ ಪೂರೈಸುತ್ತೇವೆ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>25 ವರ್ಷಗಳ ಹಿಂದೆ; ಭಾನುವಾರ, 15–4–2001</p>.<p>ಬೆಂಗಳೂರು, ಏ. 14– ಬೆಂಗಳೂರಿನ ನೂರು ದಿನಸಿ ಅಂಗಡಿಗಳಲ್ಲಿ ಚಿಲ್ಲರೆಯಾಗಿ ಬಿಯರ್ ಮಾರಾಟ ಮಾಡುವುದಕ್ಕೆ ಅನುಮತಿ ನೀಡಲು ನಿರ್ಧರಿಸಿದ್ದ ರಾಜ್ಯ ಸರ್ಕಾರ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವಾದ ಇಂದು ತನ್ನ ಉದ್ದೇಶಿತ ಪ್ರಸ್ತಾವವನ್ನು ಹಿಂತೆಗೆದುಕೊಂಡಿತು.</p>.<p>ವಿಧಾನಸೌಧದ ಮುಂಭಾಗದಲ್ಲಿ ಸಂಜೆ ಹಮ್ಮಿಕೊಂಡಿದ್ದ ಬಿ.ಆರ್. ಅಂಬೇಡ್ಕರ್ ಅವರ 110ನೇ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಜನಸಾಮಾನ್ಯರಿಂದ ವಿಶೇಷವಾಗಿ ಮಹಿಳೆಯರಿಂದ ಈ ಬಗ್ಗೆ ವ್ಯಾಪಕ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹತ್ವದ ದಿನವಾದ ಇಂದು ಬಿಯರ್ ಮಾರಾಟಕ್ಕೆ ಅನುಮತಿ ನೀಡುವ ಪ್ರಸ್ತಾವವನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ಪ್ರಕಟಿಸಿದರು.</p>.<p><strong>ರಾಜ್ಯಕ್ಕೆ ಕೇಂದ್ರದ 100 ಮೆ.ವಾ. ಹೆಚ್ಚುವರಿ ವಿದ್ಯುತ್</strong></p>.<p>ಬೆಂಗಳೂರು, ಏ. 14– ಕೇಂದ್ರದಿಂದ ಈಗ ರಾಜ್ಯಕ್ಕೆ ಪೂರೈಕೆಯಾಗುತ್ತಿರುವ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ 100 ಮೆಗಾವಾಟ್ ವಿದ್ಯುತ್ ಪೂರೈಸಲಾಗುವುದು ಎಂದು ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ ಜಯವಂತಿ ಮೆಹತಾ ಇಂದು ಇಲ್ಲಿ ಪ್ರಕಟಿಸಿದರು.</p>.<p>ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, ಕರ್ನಾಟಕವನ್ನು ನಾವು ಕತ್ತಲಲ್ಲಿ ಇಡುವುದಿಲ್ಲ. ಸಾಧ್ಯವಾದಷ್ಟು ಬೇಗನೆ ಹೆಚ್ಚುವರಿಯಾಗಿ 100 ಮೆ.ವಾ. ವಿದ್ಯುತ್ ಪೂರೈಸುತ್ತೇವೆ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>