<p>ಬೆಂಗಳೂರು, ಅ. 17– ಆಸ್ತಿಗಳಿಗಾಗಿ ನಡೆಯುತ್ತಿರುವ ವ್ಯಾಜ್ಯಗಳನ್ನು ಕಡಿಮೆ ಮಾಡುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ‘ಮರು ಮೋಜಣಿ’ (ಸರ್ವೆ) ನಡೆಸುವ ಬೃಹತ್ ಯೋಜನೆಯನ್ನು ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಲು ರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿದೆ.</p><p>ಮುಂದಿನ 10 ವರ್ಷಗಳಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಪ್ರಾರಂಭದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕನ್ನು ಇದಕ್ಕಾಗಿ ಆರಿಸಿ<br>ಕೊಳ್ಳಲಾಗಿದೆ. ಅತ್ಯಾಧುನಿಕ ಗ್ಲೋಬಲ್ ಪೊಸಿಷನಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಂಡು ಈ ಕೆಲಸ ಮಾಡಲಾಗುತ್ತದೆ.</p><p><strong>ಸಹಸ್ರಮಾನದ ಮೊದಲ ತೀರ್ಥೋದ್ಭವ</strong></p><p>ತಲಕಾವೇರಿ (ಕೊಡಗು), ಅ. 17– ಬ್ರಹ್ಮಗಿರಿ ತಪ್ಪಲಿನ ತಲಕಾವೇರಿಯಲ್ಲಿ ಜಮಾಯಿಸಿದ್ದ ಸಹಸ್ರಾರು ಸಂಖ್ಯೆಯ ಯಾತ್ರಾರ್ಥಿಗಳ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12.31ರ ತುಲಾ ಸಂಕ್ರಮಣ ಮುಹೂರ್ತದಲ್ಲಿ ಕಾವೇರಿ ತೀರ್ಥ ಆವಿರ್ಭವಿಸಿತು.</p><p>ಜೀವನದಿ ಕಾವೇರಿಯ ಉಗಮಸ್ಥಾನದಿಂದ ತಲಕಾವೇರಿಗೆ ಹೊಂದಿಕೊಂಡ ಕೊಳದ ಬಳಿ<br>ತೀರ್ಥ ಉದ್ಭವಕ್ಕೆ ಅರ್ಧ ಗಂಟೆಗೆ ಮುನ್ನವೇ ಪೊಲೀಸ್ ಬಿಗಿ ಪಹರೆಯನ್ನು ಭೇದಿಸಿ ಭಕ್ತ ಸಮೂಹವೂ ಕಾದು ನಿಂತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು, ಅ. 17– ಆಸ್ತಿಗಳಿಗಾಗಿ ನಡೆಯುತ್ತಿರುವ ವ್ಯಾಜ್ಯಗಳನ್ನು ಕಡಿಮೆ ಮಾಡುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ‘ಮರು ಮೋಜಣಿ’ (ಸರ್ವೆ) ನಡೆಸುವ ಬೃಹತ್ ಯೋಜನೆಯನ್ನು ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಲು ರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿದೆ.</p><p>ಮುಂದಿನ 10 ವರ್ಷಗಳಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಪ್ರಾರಂಭದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕನ್ನು ಇದಕ್ಕಾಗಿ ಆರಿಸಿ<br>ಕೊಳ್ಳಲಾಗಿದೆ. ಅತ್ಯಾಧುನಿಕ ಗ್ಲೋಬಲ್ ಪೊಸಿಷನಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಂಡು ಈ ಕೆಲಸ ಮಾಡಲಾಗುತ್ತದೆ.</p><p><strong>ಸಹಸ್ರಮಾನದ ಮೊದಲ ತೀರ್ಥೋದ್ಭವ</strong></p><p>ತಲಕಾವೇರಿ (ಕೊಡಗು), ಅ. 17– ಬ್ರಹ್ಮಗಿರಿ ತಪ್ಪಲಿನ ತಲಕಾವೇರಿಯಲ್ಲಿ ಜಮಾಯಿಸಿದ್ದ ಸಹಸ್ರಾರು ಸಂಖ್ಯೆಯ ಯಾತ್ರಾರ್ಥಿಗಳ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12.31ರ ತುಲಾ ಸಂಕ್ರಮಣ ಮುಹೂರ್ತದಲ್ಲಿ ಕಾವೇರಿ ತೀರ್ಥ ಆವಿರ್ಭವಿಸಿತು.</p><p>ಜೀವನದಿ ಕಾವೇರಿಯ ಉಗಮಸ್ಥಾನದಿಂದ ತಲಕಾವೇರಿಗೆ ಹೊಂದಿಕೊಂಡ ಕೊಳದ ಬಳಿ<br>ತೀರ್ಥ ಉದ್ಭವಕ್ಕೆ ಅರ್ಧ ಗಂಟೆಗೆ ಮುನ್ನವೇ ಪೊಲೀಸ್ ಬಿಗಿ ಪಹರೆಯನ್ನು ಭೇದಿಸಿ ಭಕ್ತ ಸಮೂಹವೂ ಕಾದು ನಿಂತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>