<h2>ಮಹಾರಾಷ್ಟ್ರಕ್ಕೆ ಮತ್ತೆ ಮೊರೆ</h2>.<p><strong>ಬೆಂಗಳೂರು, ಮೇ 5–</strong> ವಿಜಾಪುರ, ಬಾಗಲಕೋಟೆ, ಕಲ್ಬುರ್ಗಿ ಜಿಲ್ಲೆಯ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ಭೀಮಾ ನದಿಯ ಉಜನಿ ಬ್ಯಾರೇಜ್ ಮತ್ತು ಕೃಷ್ಣಾ ನದಿಯ ಕೊಯ್ನಾ ಅಣೆಕಟ್ಟೆಯಿಂದ ತಲಾ ಎರಡು ಟಿಎಂಸಿ ಅಡಿ ನೀರು ಬಿಡುವಂತೆ ಕರ್ನಾಟಕವು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.</p>.<p>ಕೇರಳಕ್ಕೆ ತೆರಳುವ ಮಾರ್ಗದಲ್ಲಿ ಬೆಂಗಳೂರಿನಲ್ಲಿ ಕೆಲಕಾಲ ತಂಗಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸರಾವ್ ದೇಶಮುಖ್ ಅವರಿಗೆ ತಾವು ಈ ಮನವಿ ಮಾಡಿಕೊಂಡಿದ್ದು, ಅವರು ಸಕಾರಾತ್ಮಕ ಪ್ರತಿಕ್ರಿಯೆ ತೋರಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಎಚ್.ಕೆ. ಪಾಟೀಲ್ ಇಂದು ಇಲ್ಲಿ ವರದಿಗಾರರಿಗೆ ತಿಳಿಸಿದರು.</p>.<h2>ದಳ ಆಳ್ವಿಕೆಯಲ್ಲಿನ ಯುಕೆಪಿ ಅವ್ಯವಹಾರ ತನಿಖೆಗೆ ಸಮಿತಿ</h2>.<p><strong>ಬೆಂಗಳೂರು, ಮೇ 5</strong>– ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ 1994ರಿಂದ 97ರ ನಡುವಣ ಅವಧಿಯಲ್ಲಿ ರಾಜ್ಯದಲ್ಲಿ ಜನತಾದಳ ಸರ್ಕಾರ ಅಧಿಕಾರದಲ್ಲಿ ಇದ್ದಾಗ ನಡೆದ ಭಾರಿ ಪ್ರಮಾಣದ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ನಿವೃತ್ತ ಮುಖ್ಯ ಕಾರ್ಯದರ್ಶಿ ಎ.ಬಿ. ದಾತಾರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ಸಮಿತಿಯೊಂದನ್ನು ಸರ್ಕಾರ ರಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಮಹಾರಾಷ್ಟ್ರಕ್ಕೆ ಮತ್ತೆ ಮೊರೆ</h2>.<p><strong>ಬೆಂಗಳೂರು, ಮೇ 5–</strong> ವಿಜಾಪುರ, ಬಾಗಲಕೋಟೆ, ಕಲ್ಬುರ್ಗಿ ಜಿಲ್ಲೆಯ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ಭೀಮಾ ನದಿಯ ಉಜನಿ ಬ್ಯಾರೇಜ್ ಮತ್ತು ಕೃಷ್ಣಾ ನದಿಯ ಕೊಯ್ನಾ ಅಣೆಕಟ್ಟೆಯಿಂದ ತಲಾ ಎರಡು ಟಿಎಂಸಿ ಅಡಿ ನೀರು ಬಿಡುವಂತೆ ಕರ್ನಾಟಕವು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.</p>.<p>ಕೇರಳಕ್ಕೆ ತೆರಳುವ ಮಾರ್ಗದಲ್ಲಿ ಬೆಂಗಳೂರಿನಲ್ಲಿ ಕೆಲಕಾಲ ತಂಗಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸರಾವ್ ದೇಶಮುಖ್ ಅವರಿಗೆ ತಾವು ಈ ಮನವಿ ಮಾಡಿಕೊಂಡಿದ್ದು, ಅವರು ಸಕಾರಾತ್ಮಕ ಪ್ರತಿಕ್ರಿಯೆ ತೋರಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಎಚ್.ಕೆ. ಪಾಟೀಲ್ ಇಂದು ಇಲ್ಲಿ ವರದಿಗಾರರಿಗೆ ತಿಳಿಸಿದರು.</p>.<h2>ದಳ ಆಳ್ವಿಕೆಯಲ್ಲಿನ ಯುಕೆಪಿ ಅವ್ಯವಹಾರ ತನಿಖೆಗೆ ಸಮಿತಿ</h2>.<p><strong>ಬೆಂಗಳೂರು, ಮೇ 5</strong>– ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ 1994ರಿಂದ 97ರ ನಡುವಣ ಅವಧಿಯಲ್ಲಿ ರಾಜ್ಯದಲ್ಲಿ ಜನತಾದಳ ಸರ್ಕಾರ ಅಧಿಕಾರದಲ್ಲಿ ಇದ್ದಾಗ ನಡೆದ ಭಾರಿ ಪ್ರಮಾಣದ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ನಿವೃತ್ತ ಮುಖ್ಯ ಕಾರ್ಯದರ್ಶಿ ಎ.ಬಿ. ದಾತಾರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ಸಮಿತಿಯೊಂದನ್ನು ಸರ್ಕಾರ ರಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>