<p><strong>ಪುನರ್ರಚಿತ ಕೆಪಿಸಿಸಿ: ಅತೃಪ್ತಿ</strong></p>.<p><strong>ನವದೆಹಲಿ, ಆ. 5–</strong> ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ರಚಿಸಿದ ರೀತಿಯನ್ನು ಆ ಪಕ್ಷದ ಕರ್ನಾಟಕದ ಬಹುತೇಕ ಸಂಸತ್ ಸದಸ್ಯರು ತೀವ್ರವಾಗಿ ಟೀಕಿಸಿದ್ದಾರೆ.</p>.<p>ಪ್ರಧಾನಿ ಪಿ.ವಿ.ನರಸಿಂಹರಾವ್ ಅವರು ಕೆಪಿಸಿಸಿ ಪುನರ್ರಚನೆಗೆ ಒಂದು ದಿನ ಮುಂಚೆ ಸೂರಜ್ಕುಂಡ್ನಲ್ಲಿ ಮಾಡಿದ ಭಾಷಣಕ್ಕೆ ವಿರುದ್ಧವಾಗಿಯೇ ಈ ಸಮಿತಿ ಇದೆ ಎಂದಿದ್ದಾರೆ. ಕೆಲವು ನಾಯಕರ ಮಕ್ಕಳಿಗೆ ಪದಾಧಿಕಾರಿ ಹುದ್ದೆಗಳನ್ನು ನೀಡಿರುವುದು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೇ ಹೆಚ್ಚಿನ ಸ್ಥಾನ ನೀಡಲಾಗಿದೆ ಎಂದು ಹಲವರು ಟೀಕಿಸಿ, ಇದು ‘ಮಂಗಳೂರು ಪ್ರಾದೇಶಿಕ ಕಾಂಗ್ರೆಸ್ ಸಮಿತಿ’ ಎಂದು ವ್ಯಂಗ್ಯವಾಡಿದ್ದಾಗಿ ಗೊತ್ತಾಗಿದೆ.</p>.<p><strong>ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ರಾಜ್ಯ ಅನುಮತಿ</strong></p>.<p><strong>ಬೆಂಗಳೂರು, ಆ. 5–</strong> ರಾಜ್ಯದಲ್ಲಿ ಹೊಸ ಎಂಜಿನಿಯರಿಂಗ್ ಕಾಲೇಜುಗಳ ಸ್ಥಾಪನೆ ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ಹಿಂತೆಗೆದುಕೊಳ್ಳಲು ರಾಜ್ಯ ಸಚಿವ ಸಂಪುಟ ಇಂದು ತೀರ್ಮಾನಿಸಿದೆ.</p>.<p>ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿ ಸೂಚನೆಯ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾಜ್ಯಗಳಲ್ಲಿ ಹೊಸ ಎಂಜಿನಿಯರಿಂಗ್ ಕಾಲೇಜುಗಳಿಗೆ ಅವಕಾಶವಿದೆಯೇ ಎಂಬ ಬಗ್ಗೆ ಸಮೀಕ್ಷೆ ನಡೆಸಿ, ಕರ್ನಾಟಕ ಸೇರಿದಂತೆ ದೇಶದಲ್ಲಿ 33 ಹೊಸ ಎಂಜಿನಿಯರಿಂಗ್ ಕಾಲೇಜುಗಳನ್ನು ತೆರೆಯಲು ಸಾಧ್ಯವಿದೆ ಎಂದು ಮಂಡಲಿ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುನರ್ರಚಿತ ಕೆಪಿಸಿಸಿ: ಅತೃಪ್ತಿ</strong></p>.<p><strong>ನವದೆಹಲಿ, ಆ. 5–</strong> ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ರಚಿಸಿದ ರೀತಿಯನ್ನು ಆ ಪಕ್ಷದ ಕರ್ನಾಟಕದ ಬಹುತೇಕ ಸಂಸತ್ ಸದಸ್ಯರು ತೀವ್ರವಾಗಿ ಟೀಕಿಸಿದ್ದಾರೆ.</p>.<p>ಪ್ರಧಾನಿ ಪಿ.ವಿ.ನರಸಿಂಹರಾವ್ ಅವರು ಕೆಪಿಸಿಸಿ ಪುನರ್ರಚನೆಗೆ ಒಂದು ದಿನ ಮುಂಚೆ ಸೂರಜ್ಕುಂಡ್ನಲ್ಲಿ ಮಾಡಿದ ಭಾಷಣಕ್ಕೆ ವಿರುದ್ಧವಾಗಿಯೇ ಈ ಸಮಿತಿ ಇದೆ ಎಂದಿದ್ದಾರೆ. ಕೆಲವು ನಾಯಕರ ಮಕ್ಕಳಿಗೆ ಪದಾಧಿಕಾರಿ ಹುದ್ದೆಗಳನ್ನು ನೀಡಿರುವುದು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೇ ಹೆಚ್ಚಿನ ಸ್ಥಾನ ನೀಡಲಾಗಿದೆ ಎಂದು ಹಲವರು ಟೀಕಿಸಿ, ಇದು ‘ಮಂಗಳೂರು ಪ್ರಾದೇಶಿಕ ಕಾಂಗ್ರೆಸ್ ಸಮಿತಿ’ ಎಂದು ವ್ಯಂಗ್ಯವಾಡಿದ್ದಾಗಿ ಗೊತ್ತಾಗಿದೆ.</p>.<p><strong>ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ರಾಜ್ಯ ಅನುಮತಿ</strong></p>.<p><strong>ಬೆಂಗಳೂರು, ಆ. 5–</strong> ರಾಜ್ಯದಲ್ಲಿ ಹೊಸ ಎಂಜಿನಿಯರಿಂಗ್ ಕಾಲೇಜುಗಳ ಸ್ಥಾಪನೆ ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ಹಿಂತೆಗೆದುಕೊಳ್ಳಲು ರಾಜ್ಯ ಸಚಿವ ಸಂಪುಟ ಇಂದು ತೀರ್ಮಾನಿಸಿದೆ.</p>.<p>ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿ ಸೂಚನೆಯ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾಜ್ಯಗಳಲ್ಲಿ ಹೊಸ ಎಂಜಿನಿಯರಿಂಗ್ ಕಾಲೇಜುಗಳಿಗೆ ಅವಕಾಶವಿದೆಯೇ ಎಂಬ ಬಗ್ಗೆ ಸಮೀಕ್ಷೆ ನಡೆಸಿ, ಕರ್ನಾಟಕ ಸೇರಿದಂತೆ ದೇಶದಲ್ಲಿ 33 ಹೊಸ ಎಂಜಿನಿಯರಿಂಗ್ ಕಾಲೇಜುಗಳನ್ನು ತೆರೆಯಲು ಸಾಧ್ಯವಿದೆ ಎಂದು ಮಂಡಲಿ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>