<p>ಬೆಂಗಳೂರು, ಜುಲೈ 25– ಗ್ರಾಮೀಣ ಕೃಪಾಂಕ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಲೆದೋರಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಈ ತಿಂಗಳು 31ರ ನಂತರ ಸಂದರ್ಶನಗಳನ್ನು ಮುಂದುವರಿಸಬಾರದು ಎಂದು ರಾಜ್ಯ ಸರ್ಕಾರ ಅಭಿಪ್ರಾಯಪಟ್ಟಿದೆ.</p>.<p>ಈ ಅವಧಿಯ ನಂತರ ಆಯೋಗವು ಭರ್ತಿ ಮಾಡಲಿರುವ ಹುದ್ದೆಗಳ ಅಗತ್ಯತೆ ಕುರಿತು ಈಗಾಗಲೇ ರಾಜ್ಯ ಸರ್ಕಾರವು ಲೋಕಸೇವಾ ಆಯೋಗಕ್ಕೆ ಸಲ್ಲಿಸಿರುವ ಕೋರಿಕೆಯನ್ನು ಅಮಾನತಿನಲ್ಲಿ ಇಡಲು ಉದ್ದೇಶಿಸಲಾಗಿದೆ ಎಂದು ವಾರ್ತಾ ಸಚಿವ ಪ್ರೊ.ಬಿ.ಕೆ. ಚಂದ್ರಶೇಖರ ಇಂದು ರಾತ್ರಿ ತಿಳಿಸಿದರು.</p>.<p><strong>ಕಡುಬಡವರಿಗೆ ಕಡಿಮೆ ದರದಲ್ಲಿ ಅಕ್ಕಿ, ಗೋಧಿ</strong></p>.<p>ಬೆಂಗಳೂರು, ಜುಲೈ 25– ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಸುಮಾರು 30 ಲಕ್ಷ ಕುಟುಂಬಗಳಿಗೆ ರೂ. 3.50ಕ್ಕೆ ಒಂದು ಕೆ.ಜಿಯಂತೆ ಎಂಟು ಕೆ.ಜಿ ಅಕ್ಕಿ ಮತ್ತು ರೂ. 2.75ರಂತೆ ಎರಡು ಕೆ.ಜಿ ಗೋಧಿಯನ್ನು ಮಾರಾಟ ಮಾಡಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿತು.</p>.<p>ಸಚಿವ ಸಂಪುಟ ಸಭೆಯ ನಂತರ ಗ್ರಾಮೀಣಾಭಿವೃದ್ಧಿ ಸಚಿವ ಎಂ.ವೈ. ಘೋರ್ಪಡೆ ಈ ವಿಚಾರವನ್ನು ತಿಳಿಸಿ, ಇನ್ನು ಹತ್ತು ಕೆ.ಜಿ ಧಾನ್ಯವನ್ನು ಅವರು ಹೊಸ ದರದಲ್ಲಿ ಖರೀದಿಸಬೇಕಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು, ಜುಲೈ 25– ಗ್ರಾಮೀಣ ಕೃಪಾಂಕ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಲೆದೋರಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಈ ತಿಂಗಳು 31ರ ನಂತರ ಸಂದರ್ಶನಗಳನ್ನು ಮುಂದುವರಿಸಬಾರದು ಎಂದು ರಾಜ್ಯ ಸರ್ಕಾರ ಅಭಿಪ್ರಾಯಪಟ್ಟಿದೆ.</p>.<p>ಈ ಅವಧಿಯ ನಂತರ ಆಯೋಗವು ಭರ್ತಿ ಮಾಡಲಿರುವ ಹುದ್ದೆಗಳ ಅಗತ್ಯತೆ ಕುರಿತು ಈಗಾಗಲೇ ರಾಜ್ಯ ಸರ್ಕಾರವು ಲೋಕಸೇವಾ ಆಯೋಗಕ್ಕೆ ಸಲ್ಲಿಸಿರುವ ಕೋರಿಕೆಯನ್ನು ಅಮಾನತಿನಲ್ಲಿ ಇಡಲು ಉದ್ದೇಶಿಸಲಾಗಿದೆ ಎಂದು ವಾರ್ತಾ ಸಚಿವ ಪ್ರೊ.ಬಿ.ಕೆ. ಚಂದ್ರಶೇಖರ ಇಂದು ರಾತ್ರಿ ತಿಳಿಸಿದರು.</p>.<p><strong>ಕಡುಬಡವರಿಗೆ ಕಡಿಮೆ ದರದಲ್ಲಿ ಅಕ್ಕಿ, ಗೋಧಿ</strong></p>.<p>ಬೆಂಗಳೂರು, ಜುಲೈ 25– ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಸುಮಾರು 30 ಲಕ್ಷ ಕುಟುಂಬಗಳಿಗೆ ರೂ. 3.50ಕ್ಕೆ ಒಂದು ಕೆ.ಜಿಯಂತೆ ಎಂಟು ಕೆ.ಜಿ ಅಕ್ಕಿ ಮತ್ತು ರೂ. 2.75ರಂತೆ ಎರಡು ಕೆ.ಜಿ ಗೋಧಿಯನ್ನು ಮಾರಾಟ ಮಾಡಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿತು.</p>.<p>ಸಚಿವ ಸಂಪುಟ ಸಭೆಯ ನಂತರ ಗ್ರಾಮೀಣಾಭಿವೃದ್ಧಿ ಸಚಿವ ಎಂ.ವೈ. ಘೋರ್ಪಡೆ ಈ ವಿಚಾರವನ್ನು ತಿಳಿಸಿ, ಇನ್ನು ಹತ್ತು ಕೆ.ಜಿ ಧಾನ್ಯವನ್ನು ಅವರು ಹೊಸ ದರದಲ್ಲಿ ಖರೀದಿಸಬೇಕಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>