<p><strong>ಲಾಹೋರ್, ಜೂನ್ 5:</strong> ಶಾಂತಿ ಮಾತುಕತೆ ಯತ್ನವನ್ನು ಭಾರತ ಬುಡಮೇಲು ಮಾಡುತ್ತಿದೆ ಎಂದು ಆರೋಪಿಸಿರುವ ಪಾಕ್ ಪ್ರಧಾನಿ ನವಾಜ್ ಷರೀಫ್, ಎರಡೂ ದೇಶಗಳ ನಡುವೆ ಯುದ್ಧ ನಡೆಯುವ ಸಂಭವವಿದೆ ಎಂಬ ಎಚ್ಚರಿಕೆಯನ್ನು ಇಂದು ನೀಡಿದರು.</p><p>ಎರಡೂ ದೇಶಗಳ ವಿದೇಶಾಂಗ ಸಚಿವರ ನಡುವೆ ನವದೆಹಲಿಯಲ್ಲಿ ಸೋಮವಾರ ಮಾತುಕತೆ ನಡೆಯದು ಎಂಬ ನವದೆಹಲಿಯ ವರದಿಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ ‘ಭಾರತ ಶಾಂತಿ ಮಾತುಕತೆ ನಡೆಸಲು ಗಂಭೀರ ಪ್ರಯತ್ನ ನಡೆಸುತ್ತಿಲ್ಲ’ ಎಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p><p>ಕಾಶ್ಮೀರವೂ ಸೇರಿದಂತೆ ಬಗೆಹರಿಯದೆ ಉಳಿದಿರುವ ದ್ವಿಪಕ್ಷೀಯ ವಿಷಯಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಎರಡೂ ದೇಶಗಳು ಫೆಬ್ರುವರಿಯಲ್ಲಿ ಮಾಡಿಕೊಂಡ ಒಪ್ಪಂದವನ್ನು ಭಾರತ ಉಲ್ಲಂಘಿಸುತ್ತಿದೆ ಎಂದೂ ಷರೀಫ್ ದೂರಿದರು.</p><p><strong>ವಿಮಾನ ನಿಲ್ದಾಣ: ಮುಂದಿನ ತಿಂಗಳು ಕಾರ್ಯಾರಂಭ</strong></p><p>ಬೆಂಗಳೂರು, ಜೂನ್ 5: ದೇವನಹಳ್ಳಿ ಬಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಕಾರ್ಯ ಬರುವ ಜುಲೈ ಅಂತ್ಯದ ವೇಳೆಗೆ ಪ್ರಾರಂಭವಾಗುವುದು ಖಚಿತ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಅನಂತ ಕುಮಾರ್ ಇಂದು ಇಲ್ಲಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್, ಜೂನ್ 5:</strong> ಶಾಂತಿ ಮಾತುಕತೆ ಯತ್ನವನ್ನು ಭಾರತ ಬುಡಮೇಲು ಮಾಡುತ್ತಿದೆ ಎಂದು ಆರೋಪಿಸಿರುವ ಪಾಕ್ ಪ್ರಧಾನಿ ನವಾಜ್ ಷರೀಫ್, ಎರಡೂ ದೇಶಗಳ ನಡುವೆ ಯುದ್ಧ ನಡೆಯುವ ಸಂಭವವಿದೆ ಎಂಬ ಎಚ್ಚರಿಕೆಯನ್ನು ಇಂದು ನೀಡಿದರು.</p><p>ಎರಡೂ ದೇಶಗಳ ವಿದೇಶಾಂಗ ಸಚಿವರ ನಡುವೆ ನವದೆಹಲಿಯಲ್ಲಿ ಸೋಮವಾರ ಮಾತುಕತೆ ನಡೆಯದು ಎಂಬ ನವದೆಹಲಿಯ ವರದಿಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ ‘ಭಾರತ ಶಾಂತಿ ಮಾತುಕತೆ ನಡೆಸಲು ಗಂಭೀರ ಪ್ರಯತ್ನ ನಡೆಸುತ್ತಿಲ್ಲ’ ಎಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p><p>ಕಾಶ್ಮೀರವೂ ಸೇರಿದಂತೆ ಬಗೆಹರಿಯದೆ ಉಳಿದಿರುವ ದ್ವಿಪಕ್ಷೀಯ ವಿಷಯಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಎರಡೂ ದೇಶಗಳು ಫೆಬ್ರುವರಿಯಲ್ಲಿ ಮಾಡಿಕೊಂಡ ಒಪ್ಪಂದವನ್ನು ಭಾರತ ಉಲ್ಲಂಘಿಸುತ್ತಿದೆ ಎಂದೂ ಷರೀಫ್ ದೂರಿದರು.</p><p><strong>ವಿಮಾನ ನಿಲ್ದಾಣ: ಮುಂದಿನ ತಿಂಗಳು ಕಾರ್ಯಾರಂಭ</strong></p><p>ಬೆಂಗಳೂರು, ಜೂನ್ 5: ದೇವನಹಳ್ಳಿ ಬಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಕಾರ್ಯ ಬರುವ ಜುಲೈ ಅಂತ್ಯದ ವೇಳೆಗೆ ಪ್ರಾರಂಭವಾಗುವುದು ಖಚಿತ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಅನಂತ ಕುಮಾರ್ ಇಂದು ಇಲ್ಲಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>