ಕೊಯಮತ್ತೂರು, ಡಿ. 5 (ಪಿಟಿಐ)– ನರಹಂತಕ ವೀರಪ್ಪನ್ನನ್ನು ಬಂಧಿಸಲು ನಿಯೋಜಿಸಲಾಗಿರುವ ವಿಶೇಷ ಕಾರ್ಯಾಚರಣೆ ಪಡೆ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಕ್ಷಣವೇ ತಮ್ಮ ಚಟುವಟಿಕೆಗಳನ್ನು ನಿಲ್ಲಿಸುವಂತೆ ತಿಳಿಸಲಾಗಿದೆ. ಈ ದಂತಚೋರನ ತಂಡದವರಿಂದ ಅಪಹರಣಕ್ಕೊಳಗಾಗಿರುವ ಡಿಎಸ್ಪಿ ಹಾಗೂ ಅವರ ಸಂಬಂಧಿಗಳ ಪ್ರಾಣರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.