ಲಖನೌ, ಸೆ. 20 (ಪಿಟಿಐ, ಯುಎನ್ಐ)– ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ಇಂದು ರಾತ್ರಿ ತಮ್ಮ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ರಾಜ್ಯಪಾಲ ರೋಮೇಶ್ ಭಂಡಾರಿ ಅವರು ಅಂಗೀಕರಿಸಿದ್ದು ಹೊಸ ಸರ್ಕಾರ ರಚಿಸಲು ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಅವರಿಗೆ ಆಹ್ವಾನ ನೀಡಿದ್ದಾರೆ.
ಇದಕ್ಕೂ ಮೊದಲು ಬಿಎಸ್ಪಿ ಮುಖ್ಯಸ್ಥ ಕಾನ್ಷಿರಾಂ ಅವರೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಮಾಯಾವತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಲ್ಲದೆ ಕಲ್ಯಾಣ್ಸಿಂಗ್ ಸರ್ಕಾರಕ್ಕೆ ಬೆಂಬಲ ನೀಡುವ ಪತ್ರವನ್ನು ಸಲ್ಲಿಸಿದ್ದರು.
ನ್ಯೂಯಾರ್ಕ್: ನಾಳೆ ಕ್ಲಿಂಟನ್ ಗುಜ್ರಾಲ್ ಮಾತುಕತೆ
ನ್ಯೂಯಾರ್ಕ್, ಸೆ. 20 (ಪಿಟಿಐ)– ಪ್ರಧಾನಿ ಐ.ಕೆ. ಗುಜ್ರಾಲ್ ಅವರು ಇಂದು ರಾತ್ರಿ ಇಲ್ಲಿಗೆ ಆಗಮಿಸಿದ್ದು ಸೋಮವಾರ ಅಮೆರಿಕ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರೊಂದಿಗೆ ಮಾತುಕತೆ ನಡೆಸುವರು.
ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಅಮೆರಿಕಕ್ಕೆ ಆಗಮಿಸುತ್ತಿರುವ ಗುಜ್ರಾಲ್ ಅವರು ನ್ಯೂಯಾರ್ಕ್ನಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತುಕತೆ ನಡೆಸುವ ಕಾರ್ಯಕ್ರಮವೂ ಇದೆ.