ನವದೆಹಲಿ, ಮೇ, 17 (ಪಿಟಿಐ)– ಲೋಕಸಭೆಯಲ್ಲಿ ಸ್ಪೀಕರ್ ಹುದ್ದೆಗೆ ತೃತೀಯ ರಂಗ ಮತ್ತು ಕಾಂಗ್ರೆಸ್ ಪಕ್ಷಗಳ ಸಹಿತ ಎಲ್ಲ ವಿರೋಧ ಪಕ್ಷಗಳ ಸಮಾನ ಅಭ್ಯರ್ಥಿಯನ್ನು ಸ್ಪರ್ಧೆಗೆ ಇಳಿಸುವ ಮಹತ್ವದ ಬೆಳವಣಿಗೆ ಇಂದು ನಡೆದಿದೆ. ಈ ಮಧ್ಯೆ ವಾಜಪೇಯಿ ನೇತೃತ್ವದ ಸರ್ಕಾರದ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಮತ ಚಲಾಯಿಸಲು ತನ್ನ ಸಂಸತ್ ಸದಸ್ಯರಿಗೆ ‘ವಿಪ್’ ನೀಡಲೂ ಕಾಂಗ್ರೆಸ್ ನಿರ್ಧರಿಸಿದೆ.