ಜನತಾದಳ ಮತ್ತು ಬಿಜೆಪಿ ನಡುವೆ ಸಿಕ್ಕಿ ದೂಳೀಪಟವಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ಸಂಪುಟ ಸಭೆ ನಂತರ ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಖುರ್ಷಿದ್ ಆಲಂಖಾನ್ ಅವರಿಗೆ ಸಚಿವ ಸಂಪುಟದ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದರು.