ಸಕಲೇಶಪುರ, ಸೆ. 12– ಇಲ್ಲಿಯ ಬಸ್ ನಿಲ್ದಾಣದಲ್ಲಿ ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸೊಂದು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸತ್ತ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಜನರು ಹಿಂಸಾ ಚಾರಕ್ಕೆ ಇಳಿದು ಬಸ್ ನಿಲ್ದಾಣ ಧ್ವಂಸಗೊಳಿಸಿ ದರು. ಗೋಲಿಬಾರ್ನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಐದು ಸರ್ಕಾರಿ ಬಸ್ಗಳು ರೋಷಕ್ಕೆ ಭಸ್ಮವಾಗಿವೆ.