ಶಂಕರಾನಂದ ವಿರುದ್ಧ ಹೈಕೋರ್ಟಿಗೆ ವರದಿ
ನವದೆಹಲಿ, ಸೆ.13 (ಯುಎನ್ಐ)– ಕೋಟ್ಯಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣ ಆಮದು ಹಗರಣದಲ್ಲಿ ಕೇಂದ್ರ ಆರೋಗ್ಯ ಖಾತೆಯ ಮಾಜಿ ಸಚಿವ ಬಿ.ಶಂಕರಾನಂದ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟಿನಲ್ಲಿ ಇಂದು ಕೇಂದ್ರ ಸರ್ಕಾರದ ವೈದ್ಯಕೀಯ ಇಲಾಖೆ ಸಲ್ಲಿಸಿದ ತನಿಖಾ ವರದಿ ಬಹಿರಂಗಪಡಿಸಿದೆ.
ಮಹಿಳಾ ಮೀಸಲಾತಿ ಮಸೂದೆಗೆ ಅಂಗೀಕಾರ ಇಲ್ಲ
ನವದೆಹಲಿ, ಸೆ.13 (ಯುಎನ್ಐ)– ಲೋಕಸಭೆ ಹಾಗೂ ರಾಜ್ಯ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಕುರಿತ ಮಸೂದೆ ಅಂಗೀಕಾರ ಪಡೆಯಲು ವಿಫಲ ವಾಗಿದ್ದು, ಮಸೂದೆಯನ್ನು ಜಂಟಿ ಸದನ ಸಮಿತಿಗೆ ಪರಿಶೀಲನೆಗಾಗಿ ಒಪ್ಪಿಸಲಾಗಿದೆ.
ನಗರದಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿರುವ ‘ಮದ್ರಾಸ್ ಐ’
ಬೆಂಗಳೂರು ಸೆ.13– ‘ಮದ್ರಾಸ್ ಐ’ ಎಂದೇ ಖ್ಯಾತವಾಗಿರುವ ಕಣ್ಣಿನ ಸೋಂಕು ರೋಗ ನಗರದಲ್ಲಿ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಮಿಂಟೋ ಕಣ್ಣಾಸ್ಪತ್ರೆಯಲ್ಲಿ ಕಣ್ಣಿನ ಪೊರೆ ತೆಗೆಯುವ ಶಸ್ತ್ರ ಚಿಕಿತ್ಸೆಯನ್ನು ಸೆ.23 ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.