ನವದೆಹಲಿ, ಅ. 1 (ಪಿಟಿಐ)– ಹಲವಾರು ಪ್ರಮುಖ ರಾಜಕೀಯ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎನ್ನಲಾದ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಯುತ್ತಿರುವಾಗ, ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎ.ಎಂ.ಅಹ್ಮದಿ ಅವರು ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಮಧ್ಯರಾತ್ರಿ ವೇಳೆ ‘ನಿಗೂಢ’ವಾಗಿ ಭೇಟಿಯಾಗಿರುವುದನ್ನು ಸುಪ್ರೀಂ ಕೋರ್ಟ್ ವಕೀಲರ ಸಂಘದ 200 ಸದಸ್ಯರು ಪ್ರತಿಭಟಿಸಿದ್ದಾರೆ.