ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ| ಮಂಗಳವಾರ, 31–12–1996

Last Updated 30 ಡಿಸೆಂಬರ್ 2021, 19:30 IST
ಅಕ್ಷರ ಗಾತ್ರ

ಅಸ್ಸಾಂ: ರೈಲಿನಲ್ಲಿ ಬಾಂಬ್‌ ಸ್ಫೋಟ– 300 ಸಾವು

ಗುವಾಹಟಿ, ಡಿ. 30 (ಪಿಟಿಐ)– ದೆಹಲಿಗೆ ತೆರಳುತ್ತಿದ್ದ ಬ್ರಹ್ಮಪುತ್ರ ಮೇಲ್‌ ರೈಲಿನಲ್ಲಿ ಇಂದು ರಾತ್ರಿ ಶಕ್ತಿಶಾಲಿ ಬಾಂಬ್‌ ಸ್ಫೋಟಿಸಿ ಸುಮಾರು 300ಕ್ಕೂ ಹೆಚ್ಚು ಪ್ರಯಾಣಿಕರು ಸತ್ತ ಭೀಕರ ದುರ್ಘಟನೆ ಸಂಭವಿಸಿದೆ.

ರಾತ್ರಿ 7.30ಕ್ಕೆ ಕೊಕ್ರಜಾರ್‌ ಜಿಲ್ಲೆಯ ಶೇಷಪಾಣಿ ರೈಲು ನಿಲ್ದಾಣದ ಬಳಿ ಈ ಬಾಂಬ್‌ ಸ್ಫೋಟದ ದುರಂತ ಸಂಭವಿಸಿದೆ. ಮೂರು ಬೋಗಿಗಳು ಬಾಂಬ್‌ಗೆ ಸಿಕ್ಕು ಪೂರ್ಣ ನಾಶವಾಗಿದ್ದು, ಇತರ ಎರಡು ಬೋಗಿಗಳು ಹಳಿ ತಪ್ಪಿ ಉರುಳಿವೆ ಎಂದು ಮಧ್ಯರಾತ್ರಿ ಬಂದ ವರದಿಗಳು ತಿಳಿಸಿವೆ.

ದುರಂತದಲ್ಲಿ ನೂರಾರು ಪ್ರಯಾಣಿಕರಿಗೆ ಗಾಯಗಳಾಗಿವೆ. ಇದು ಬೋಡೋ ಉಗ್ರಗಾಮಿಗಳ ಕೃತ್ಯ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ರಾಜೀವ್‌ ಹತ್ಯೆ ಪ್ರಕರಣ ವಿಚಾರಣೆ ಮರು ಆರಂಭ

ಚೆನ್ನೈ, ಡಿ. 30 (ಯುಎನ್‌ಐ)– ಐದು ವರ್ಷಗಳಿಂದ ವಿಚಾರಣೆ ನಡೆಯುತ್ತಿರುವ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಸದಾಗಿ ನೇಮಕವಾಗಿರುವ ನ್ಯಾಯಾಧೀಶರು ಇಂದು ತಮ್ಮ ಮೊದಲ ವಿಚಾರಣಾ ಸಭೆ ನಡೆಸುವುದರೊಂದಿಗೆ ಈ ಪ್ರಕರಣ ಈಗ ಕೊನೆಯ ಘಟ್ಟಕ್ಕೆ ಬಂದಿದೆ.

ರಾಜೀವ್‌ ಹತ್ಯೆ ಪ್ರಕರಣದ ವಿಚಾರಣಾ ಅಧಿಕಾರಿಯಾಗಿದ್ದ ನ್ಯಾಯಮೂರ್ತಿ ಎಸ್‌.ಎಂ.ಸಿದ್ದಿಕ್‌ ಅವರು ಹೈಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರಿಂದ ಆ ಸ್ಥಾನಕ್ಕೆ ಮದ್ರಾಸ್‌ ಹೈಕೋರ್ಟ್‌ನ ಅಡಿಷನಲ್‌ ರಿಜಿಸ್ಟ್ರಾರ್‌ ಆಗಿದ್ದ ನವನೀತಂ ಈಗ ಹೊಸ ವಿಚಾರಣಾ ಅಧಿಕಾರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT