<p id="thickbox_headline"><strong>ಗುಜ್ರಾಲ್ ಆದೇಶ: ಕೇಂದ್ರ ಸಚಿವ ವರ್ಮ ರಾಜೀನಾಮೆ</strong></p>.<p><strong>ಪಟ್ನಾ, ಜೂನ್ 20 (ಯುಎನ್ಐ)– </strong>ಬಿಹಾರದ ಮೇವು ಹಗರಣದ ಆರೋಪಿಗಳಲ್ಲಿ ಒಬ್ಬರಾದ ಕೇಂದ್ರ<br />ಗ್ರಾಮೀಣಾಭಿವೃದ್ಧಿ ಹಾಗೂ ಉದ್ಯೋಗ ಖಾತೆಯ ರಾಜ್ಯ ಸಚಿವ ಚಂದ್ರದೇವ್ ಪ್ರಸಾದ್ ವರ್ಮ ಅವರು ಪ್ರಧಾನಿ ಅವರ ಆದೇಶದ ಅನ್ವಯ ಇಂದು ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಿದರು.</p>.<p>ಸಚಿವ ಪದವಿಗೆ ರಾಜೀನಾಮೆ ನೀಡುವಂತೆ ಪ್ರಧಾನಿ ಅವರು ದೆಹಲಿಯಿಂದ ಇಂದು ತುರ್ತು ಫ್ಯಾಕ್ಸ್ ಸಂದೇಶ ಕಳುಹಿಸಿದ್ದರ ಮೇರೆಗೆ ವರ್ಮ ಅವರೂ ಫ್ಯಾಕ್ಸ್ ಮೂಲಕ ರಾಷ್ಟ್ರಪತಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದರು.</p>.<p>ಬಿಹಾರ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲ ಕಿದ್ವಾಯಿ ಅವರು ಸಿಬಿಐಗೆ ಅನುಮತಿ ನೀಡಿದ್ದಾರೆ, ಆ ಕುರಿತು ನೀವೇನು ಹೇಳುತ್ತೀರಿ ಎಂದು ಪತ್ರಕರ್ತರು ದೆಹಲಿಯಲ್ಲಿ ಪ್ರಶ್ನಿಸಿದಾಗ, ಗುಜ್ರಾಲ್ ಯಾವುದೇ ಉತ್ತರ<br />ನೀಡಲಿಲ್ಲ.</p>.<p><strong>ನಾರಾಯಣನ್ ನಾಮಪತ್ರ ಸಲ್ಲಿಕೆ</strong></p>.<p><strong>ನವದೆಹಲಿ, ಜೂನ್ 20 (ಯುಎನ್ಐ, ಪಿಟಿಐ)–</strong> ಉಪರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರು ಇಂದು ರಾಷ್ಟ್ರಪತಿ ಸ್ಥಾನಕ್ಕೆ ಸಂಯುಕ್ತ ರಂಗ ಮತ್ತು ಕಾಂಗ್ರೆಸ್ ಪಕ್ಷಗಳ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.</p>.<p>ನಾರಾಯಣನ್ ಅವರ ಪರವಾಗಿ ಪ್ರಧಾನಿ ಐ.ಕೆ. ಗುಜ್ರಾಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಸೀತಾರಾಂ ಕೇಸರಿ ನಾಮಪತ್ರಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅನೇಕ ಸಚಿವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p id="thickbox_headline"><strong>ಗುಜ್ರಾಲ್ ಆದೇಶ: ಕೇಂದ್ರ ಸಚಿವ ವರ್ಮ ರಾಜೀನಾಮೆ</strong></p>.<p><strong>ಪಟ್ನಾ, ಜೂನ್ 20 (ಯುಎನ್ಐ)– </strong>ಬಿಹಾರದ ಮೇವು ಹಗರಣದ ಆರೋಪಿಗಳಲ್ಲಿ ಒಬ್ಬರಾದ ಕೇಂದ್ರ<br />ಗ್ರಾಮೀಣಾಭಿವೃದ್ಧಿ ಹಾಗೂ ಉದ್ಯೋಗ ಖಾತೆಯ ರಾಜ್ಯ ಸಚಿವ ಚಂದ್ರದೇವ್ ಪ್ರಸಾದ್ ವರ್ಮ ಅವರು ಪ್ರಧಾನಿ ಅವರ ಆದೇಶದ ಅನ್ವಯ ಇಂದು ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಿದರು.</p>.<p>ಸಚಿವ ಪದವಿಗೆ ರಾಜೀನಾಮೆ ನೀಡುವಂತೆ ಪ್ರಧಾನಿ ಅವರು ದೆಹಲಿಯಿಂದ ಇಂದು ತುರ್ತು ಫ್ಯಾಕ್ಸ್ ಸಂದೇಶ ಕಳುಹಿಸಿದ್ದರ ಮೇರೆಗೆ ವರ್ಮ ಅವರೂ ಫ್ಯಾಕ್ಸ್ ಮೂಲಕ ರಾಷ್ಟ್ರಪತಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದರು.</p>.<p>ಬಿಹಾರ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲ ಕಿದ್ವಾಯಿ ಅವರು ಸಿಬಿಐಗೆ ಅನುಮತಿ ನೀಡಿದ್ದಾರೆ, ಆ ಕುರಿತು ನೀವೇನು ಹೇಳುತ್ತೀರಿ ಎಂದು ಪತ್ರಕರ್ತರು ದೆಹಲಿಯಲ್ಲಿ ಪ್ರಶ್ನಿಸಿದಾಗ, ಗುಜ್ರಾಲ್ ಯಾವುದೇ ಉತ್ತರ<br />ನೀಡಲಿಲ್ಲ.</p>.<p><strong>ನಾರಾಯಣನ್ ನಾಮಪತ್ರ ಸಲ್ಲಿಕೆ</strong></p>.<p><strong>ನವದೆಹಲಿ, ಜೂನ್ 20 (ಯುಎನ್ಐ, ಪಿಟಿಐ)–</strong> ಉಪರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರು ಇಂದು ರಾಷ್ಟ್ರಪತಿ ಸ್ಥಾನಕ್ಕೆ ಸಂಯುಕ್ತ ರಂಗ ಮತ್ತು ಕಾಂಗ್ರೆಸ್ ಪಕ್ಷಗಳ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.</p>.<p>ನಾರಾಯಣನ್ ಅವರ ಪರವಾಗಿ ಪ್ರಧಾನಿ ಐ.ಕೆ. ಗುಜ್ರಾಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಸೀತಾರಾಂ ಕೇಸರಿ ನಾಮಪತ್ರಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅನೇಕ ಸಚಿವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>