ಜಿಲ್ಲೆಗಳನ್ನು ಮರು ವಿಂಗಡಣೆ ಮಾಡಬೇಕು ಎಂಬುದು ಒಳ್ಳೆಯ ಆಡಳಿತ ಕೊಡಬೇಕು ಎನ್ನುವ ಉದ್ದೇಶದಿಂದ ಕೈಗೊಂಡ ತೀರ್ಮಾನ. ಆದರೆ, ಕನ್ನಡ ಶಕ್ತಿ ಕೇಂದ್ರದ ಡಾ. ಎಂ. ಚಿದಾನಂದಮೂರ್ತಿ, ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಮತ್ತು ಇತರೆ ಕನ್ನಡಪರ ಸಂಘಟನೆಗಳು ಬೆಳಗಾವಿ ವಿಭಜನೆ ಬಗ್ಗೆ ಅವಸರದ ಕ್ರಮ ತೆಗೆದುಕೊಳ್ಳಬೇಡಿ ಎಂದು ಸೂಚಿಸಿದರು ಎಂದು ಹೇಳಿದರು.