<p id="thickbox_headline"><strong>ಅಯೋಧ್ಯೆ ಶಿಲಾನ್ಯಾಸ: ಕಾಂಗ್ರೆಸ್ ಸಮರ್ಥನೆ</strong></p>.<p><strong>ನವದೆಹಲಿ, ಜ. 23– </strong>ನ್ಯಾಯಾಲಯದ ಆದೇಶದ ಮೇರೆಗೆ ಬಾಬ್ರಿ ಮಸೀದಿ ಬಾಗಿಲುಗಳನ್ನು ತೆರೆಯಲಾಗಿದೆ ಹಾಗೂ ಸಂಬಂಧಪಟ್ಟ ಎಲ್ಲಾ ಪಕ್ಷಗಳ ಒಪ್ಪಂದದ ಮೇಲೆ ದೇವಾಲಯ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಇಂದು ಅಯೋಧ್ಯೆ ವಿಷಯವನ್ನು ಸಮರ್ಥಿಸಿಕೊಂಡಿದೆ.</p>.<p>ಯಾವುದೇ ಪಕ್ಷದ ಹೆಸರನ್ನು ಹೇಳದೆ, ಈ ಎರಡು ಘಟನೆಗಳು ಯಾವುದೇ ಒಂದು ಪಕ್ಷದ ಏಕಾಏಕಿ ಕ್ರಮವಲ್ಲ ಎಂದು ಕಾಂಗ್ರೆಸ್ ನಾಯಕ ಅರ್ಜುನ್ ಸಿಂಗ್ ನಿತ್ಯದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ರಾಜೀವ್ ಗಾಂಧಿ ಜೀವಂತವಾಗಿದ್ದರೆ ಮಸೀದಿ ನಾಶಕ್ಕೆ ಅವಕಾಶ ಕೊಡುತ್ತಿರಲಿಲ್ಲ ಎಂದು ಸೋನಿಯಾ ಗಾಂಧಿ ಅವರು ತಮ್ಮ ಚುನಾವಣಾ ಪ್ರಚಾರದಲ್ಲಿ ನೀಡಿದ್ದ ಹೇಳಿಕೆಗೆ ಸಮಾಜವಾದಿ ಪಕ್ಷವು ಟೀಕಿಸಿದ್ದಕ್ಕೆ ಈ ಉತ್ತರ ನೀಡಲಾಗಿದೆ.</p>.<p><strong>ಬೊಫೋರ್ಸ್ ದಾಖಲೆ ಬಹಿರಂಗ ಬೇಡಿಕೆಗೆ ಪ್ರಧಾನಿ ನಕಾರ</strong></p>.<p><strong>ಜಲಂಧರ್, ಜ. 23 (ಪಿಟಿಐ)–</strong> ಬೊಫೋರ್ಸ್ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗ ಪಡಿಸಬೇಕೆಂಬ ಬೇಡಿಕೆಯನ್ನು ಪ್ರಧಾನಿ ಐ.ಕೆ. ಗುಜ್ರಾಲ್ ಅವರು ಇಂದು ಇಲ್ಲಿ ತಿರಸ್ಕರಿಸಿದ್ದಾರೆ.</p>.<p>‘ಬೊಫೋರ್ಸ್ ಪ್ರಕರಣಕ್ಕೆ ಸಂಬಂಧಿ ಸಿದಂತೆ ಸ್ವಿಟ್ಜರ್ಲ್ಯಾಂಡ್ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಯಾವುದೇ ದಾಖಲೆ ಬಹಿರಂಗ ಪಡಿಸಲು ಸಾಧ್ಯವಿಲ್ಲವೆಂದು ಸಿಬಿಐ ಈಗಾಗಲೇ ಸ್ಪಷ್ಟಪಡಿಸಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p id="thickbox_headline"><strong>ಅಯೋಧ್ಯೆ ಶಿಲಾನ್ಯಾಸ: ಕಾಂಗ್ರೆಸ್ ಸಮರ್ಥನೆ</strong></p>.<p><strong>ನವದೆಹಲಿ, ಜ. 23– </strong>ನ್ಯಾಯಾಲಯದ ಆದೇಶದ ಮೇರೆಗೆ ಬಾಬ್ರಿ ಮಸೀದಿ ಬಾಗಿಲುಗಳನ್ನು ತೆರೆಯಲಾಗಿದೆ ಹಾಗೂ ಸಂಬಂಧಪಟ್ಟ ಎಲ್ಲಾ ಪಕ್ಷಗಳ ಒಪ್ಪಂದದ ಮೇಲೆ ದೇವಾಲಯ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಇಂದು ಅಯೋಧ್ಯೆ ವಿಷಯವನ್ನು ಸಮರ್ಥಿಸಿಕೊಂಡಿದೆ.</p>.<p>ಯಾವುದೇ ಪಕ್ಷದ ಹೆಸರನ್ನು ಹೇಳದೆ, ಈ ಎರಡು ಘಟನೆಗಳು ಯಾವುದೇ ಒಂದು ಪಕ್ಷದ ಏಕಾಏಕಿ ಕ್ರಮವಲ್ಲ ಎಂದು ಕಾಂಗ್ರೆಸ್ ನಾಯಕ ಅರ್ಜುನ್ ಸಿಂಗ್ ನಿತ್ಯದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ರಾಜೀವ್ ಗಾಂಧಿ ಜೀವಂತವಾಗಿದ್ದರೆ ಮಸೀದಿ ನಾಶಕ್ಕೆ ಅವಕಾಶ ಕೊಡುತ್ತಿರಲಿಲ್ಲ ಎಂದು ಸೋನಿಯಾ ಗಾಂಧಿ ಅವರು ತಮ್ಮ ಚುನಾವಣಾ ಪ್ರಚಾರದಲ್ಲಿ ನೀಡಿದ್ದ ಹೇಳಿಕೆಗೆ ಸಮಾಜವಾದಿ ಪಕ್ಷವು ಟೀಕಿಸಿದ್ದಕ್ಕೆ ಈ ಉತ್ತರ ನೀಡಲಾಗಿದೆ.</p>.<p><strong>ಬೊಫೋರ್ಸ್ ದಾಖಲೆ ಬಹಿರಂಗ ಬೇಡಿಕೆಗೆ ಪ್ರಧಾನಿ ನಕಾರ</strong></p>.<p><strong>ಜಲಂಧರ್, ಜ. 23 (ಪಿಟಿಐ)–</strong> ಬೊಫೋರ್ಸ್ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗ ಪಡಿಸಬೇಕೆಂಬ ಬೇಡಿಕೆಯನ್ನು ಪ್ರಧಾನಿ ಐ.ಕೆ. ಗುಜ್ರಾಲ್ ಅವರು ಇಂದು ಇಲ್ಲಿ ತಿರಸ್ಕರಿಸಿದ್ದಾರೆ.</p>.<p>‘ಬೊಫೋರ್ಸ್ ಪ್ರಕರಣಕ್ಕೆ ಸಂಬಂಧಿ ಸಿದಂತೆ ಸ್ವಿಟ್ಜರ್ಲ್ಯಾಂಡ್ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಯಾವುದೇ ದಾಖಲೆ ಬಹಿರಂಗ ಪಡಿಸಲು ಸಾಧ್ಯವಿಲ್ಲವೆಂದು ಸಿಬಿಐ ಈಗಾಗಲೇ ಸ್ಪಷ್ಟಪಡಿಸಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>