ನವದೆಹಲಿ, ಜ. 29 (ಯುಎನ್ಐ, ಪಿಟಿಐ)– ಹವಾಲಾ ಹಗರಣದಲ್ಲಿ ಏಳು ಮಂದಿ ರಾಜಕಾರಣಿಗಳ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಸಿಬಿಐ ಮಾಡಿಕೊಂಡ ಮನವಿ ಹಿನ್ನೆಲೆಯಲ್ಲಿ ಇಂದು ನಡೆಯಬೇಕಾಗಿದ್ದ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶ ವಿ.ಬಿ.ಗುಪ್ತಾ ಅವರು ಫೆಬ್ರುವರಿ 15ಕ್ಕೆ ಮುಂದೂಡಿದರು.