<p><strong>ರಾಜ್ಯಸಭೆ: ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನ</strong></p>.<p><strong>ಬೆಂಗಳೂರು, ಫೆ. 8– </strong>ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದ್ದು, ಮೂರು ಮತ್ತು ನಾಲ್ಕನೇ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜನತಾದಳ, ಭಾರತೀಯ ಜನತಾ ಪಕ್ಷಗಳು ಅಂತಿಮ ನಿರ್ಧಾರದ ಕಸರತ್ತಿನಲ್ಲಿ ಮುಳುಗಿವೆ.</p>.<p>ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರಿರುವ ಮುಚ್ಚಿದ ಲಕೋಟೆ ಜತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಹೊಣೆ ಹೊತ್ತಿರುವ ಮಾಧವ ಸಿನ್ಹ ಸೋಲಂಕಿ ಅವರು ನಾಳೆ ಬೆಳಿಗ್ಗೆ ನಗರಕ್ಕೆ<br />ಆಗಮಿಸಲಿದ್ದಾರೆ.</p>.<p><strong>ದಾವೂದ್ ಸಹಚರರಿಗೆ ಆಶ್ರಯ ಕಲ್ಪನಾಥ್ ನಿರಾಕರಣೆ</strong></p>.<p><strong>ನವದೆಹಲಿ, ಫೆ. 8 (ಯುಎನ್ಐ): </strong>ಮಾಫಿಯಾ ತಂಡದ ನಾಯಕ ದಾವೂದ್ ಇಬ್ರಾಹಿಂ ಸಹಚರರೊಂದಿಗೆ ಸಂಪರ್ಕವಿದೆ ಎಂಬ ಆರೋಪವನ್ನು ಕೇಂದ್ರದ ಮಾಜಿ ಸಚಿವ ಕಲ್ಪನಾಥ ರಾಯ್ ಇಂದು ಇಲ್ಲಿ ನಿರಾಕರಿಸಿದ್ದಾರೆ. ಈ ಸಂಬಂಧ ಸಿಬಿಐ ತಮ್ಮ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. ಹವಾಲಾ ಪ್ರಕರಣದಲ್ಲೂ ಹಣ ಪಡೆದಿರುವ ಆಪಾ ದನೆಯನ್ನೂ ಅವರು ಅಲ್ಲಗಳೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಯಸಭೆ: ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನ</strong></p>.<p><strong>ಬೆಂಗಳೂರು, ಫೆ. 8– </strong>ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದ್ದು, ಮೂರು ಮತ್ತು ನಾಲ್ಕನೇ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜನತಾದಳ, ಭಾರತೀಯ ಜನತಾ ಪಕ್ಷಗಳು ಅಂತಿಮ ನಿರ್ಧಾರದ ಕಸರತ್ತಿನಲ್ಲಿ ಮುಳುಗಿವೆ.</p>.<p>ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರಿರುವ ಮುಚ್ಚಿದ ಲಕೋಟೆ ಜತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಹೊಣೆ ಹೊತ್ತಿರುವ ಮಾಧವ ಸಿನ್ಹ ಸೋಲಂಕಿ ಅವರು ನಾಳೆ ಬೆಳಿಗ್ಗೆ ನಗರಕ್ಕೆ<br />ಆಗಮಿಸಲಿದ್ದಾರೆ.</p>.<p><strong>ದಾವೂದ್ ಸಹಚರರಿಗೆ ಆಶ್ರಯ ಕಲ್ಪನಾಥ್ ನಿರಾಕರಣೆ</strong></p>.<p><strong>ನವದೆಹಲಿ, ಫೆ. 8 (ಯುಎನ್ಐ): </strong>ಮಾಫಿಯಾ ತಂಡದ ನಾಯಕ ದಾವೂದ್ ಇಬ್ರಾಹಿಂ ಸಹಚರರೊಂದಿಗೆ ಸಂಪರ್ಕವಿದೆ ಎಂಬ ಆರೋಪವನ್ನು ಕೇಂದ್ರದ ಮಾಜಿ ಸಚಿವ ಕಲ್ಪನಾಥ ರಾಯ್ ಇಂದು ಇಲ್ಲಿ ನಿರಾಕರಿಸಿದ್ದಾರೆ. ಈ ಸಂಬಂಧ ಸಿಬಿಐ ತಮ್ಮ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. ಹವಾಲಾ ಪ್ರಕರಣದಲ್ಲೂ ಹಣ ಪಡೆದಿರುವ ಆಪಾ ದನೆಯನ್ನೂ ಅವರು ಅಲ್ಲಗಳೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>