ಮಂಗಳೂರು, ಫೆ. 10– ‘ಈ ದೇಶ ಅತ್ಯಂತ ಪ್ರಾಚೀನ ನಾಗರಿಕತೆಯುಳ್ಳ ದೇಶ. ಆದರೆ, ಇದನ್ನು ಎಲ್ಲಾ ವಿಧದಲ್ಲೂ ಆಧುನಿಕಗೊಳಿಸುವ ಕಾರ್ಯ ನಿಮ್ಮದಾಗಿದೆ. ಬಡವ ಮತ್ತು ಶ್ರೀಮಂತರ ನಡುವಣ ಅಂತರವನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಧರ್ಮದ ಹೆಸರಿನಲ್ಲಿ, ಜಾತಿಯ ಹೆಸರಿನಲ್ಲಿ ನಡೆಯುವ ಅನ್ಯಾಯವನ್ನು ಎದುರಿಸ
ಬೇಕಾಗಿದೆ’ ಎಂದು ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರು ಇಂದು ಇಲ್ಲಿ ತಿಳಿಸಿದರು.