ನವದೆಹಲಿ, ಜ. 25– ಈ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅಸ್ಸಾಂ ರಾಜ್ಯದ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಪಿ. ಚಾಲಿಹಾ, ಗಾಯಕ ಉಸ್ತಾದ್ ಅಲ್ಲಾವುದ್ದೀನ್ ಖಾನ್ ಮತ್ತು ನೃತ್ಯ ಕಲಾವಿದ ಉದಯಶಂಕರ್ ಅವರೂ ಸೇರಿ ಆರು ಮಂದಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ‘ಭಾರತ ರತ್ನ’ ಪ್ರಶಸ್ತಿಯನ್ನು ಈ ಬಾರಿ ಯಾರಿಗೂ ಕೊಡಲಾಗಿಲ್ಲ.