<p><strong>ಬೆಂಗಳೂರು, ಮೇ 26</strong>– ರಾಜ್ಯದಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಉತ್ಪಾದನೆ ಹೆಚ್ಚಿಸಲು ಸಮರೋಪಾದಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಇಲ್ಲಿ ಕರೆ ನೀಡಿದರು.</p><p>ನಬಾರ್ಡ್ನ ವಿಕಾಸ ವಾಲೆಂಟರಿ ವಾಹಿನಿಯ ರಾಜ್ಯಮಟ್ಟದ ಪ್ರಗತಿ ಪರಿಶೀಲನೆ ಮತ್ತು ಅಭಿವೃದ್ಧಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ಆಹಾರ ಉತ್ಪಾದನೆಯಲ್ಲಿ ರಾಜ್ಯದ ಪ್ರಗತಿ ಕಳೆದೆರಡು ವರ್ಷಗಳಿಂದ ಕುಂಠಿತಗೊಂಡಿದೆ. ಇದು ಆತಂಕಕಾರಿ ಬೆಳವಣಿಗೆ ಎಂದರು.</p><p>ಆಹಾರ ಧಾನ್ಯಗಳ ಉತ್ಪಾದನೆ ಜಾಸ್ತಿ ಆಗಬೇಕಾದರೆ ಉತ್ಪಾದಕತೆಯನ್ನು ಹೆಚ್ಚಿಸಬೇಕು. ರೈತರಿಗೆ ಸಕಾಲಕ್ಕೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಒದಗಿಸಿ ಆಧುನಿಕ ಹಾಗೂ ವೈಜ್ಞಾನಿಕ ಬೇಸಾಯ ಪದ್ಧತಿಗಳ ಪರಿಚಯ ಮಾಡಿಕೊಟ್ಟರೆ ಉತ್ಪಾದನೆ ಖಂಡಿತವಾಗಿ ಹೆಚ್ಚಾಗುತ್ತದೆ. ಈ ಕೆಲಸವನ್ನು ಕೃಷಿ ತಜ್ಞರು, ಅಧಿಕಾರಿಗಳು, ನಬಾರ್ಡ್ ಮುಂತಾದ ಹಣಕಾಸು ಸಂಸ್ಥೆಗಳು ಮಾಡಬೇಕಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು, ಮೇ 26</strong>– ರಾಜ್ಯದಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಉತ್ಪಾದನೆ ಹೆಚ್ಚಿಸಲು ಸಮರೋಪಾದಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಇಲ್ಲಿ ಕರೆ ನೀಡಿದರು.</p><p>ನಬಾರ್ಡ್ನ ವಿಕಾಸ ವಾಲೆಂಟರಿ ವಾಹಿನಿಯ ರಾಜ್ಯಮಟ್ಟದ ಪ್ರಗತಿ ಪರಿಶೀಲನೆ ಮತ್ತು ಅಭಿವೃದ್ಧಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ಆಹಾರ ಉತ್ಪಾದನೆಯಲ್ಲಿ ರಾಜ್ಯದ ಪ್ರಗತಿ ಕಳೆದೆರಡು ವರ್ಷಗಳಿಂದ ಕುಂಠಿತಗೊಂಡಿದೆ. ಇದು ಆತಂಕಕಾರಿ ಬೆಳವಣಿಗೆ ಎಂದರು.</p><p>ಆಹಾರ ಧಾನ್ಯಗಳ ಉತ್ಪಾದನೆ ಜಾಸ್ತಿ ಆಗಬೇಕಾದರೆ ಉತ್ಪಾದಕತೆಯನ್ನು ಹೆಚ್ಚಿಸಬೇಕು. ರೈತರಿಗೆ ಸಕಾಲಕ್ಕೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಒದಗಿಸಿ ಆಧುನಿಕ ಹಾಗೂ ವೈಜ್ಞಾನಿಕ ಬೇಸಾಯ ಪದ್ಧತಿಗಳ ಪರಿಚಯ ಮಾಡಿಕೊಟ್ಟರೆ ಉತ್ಪಾದನೆ ಖಂಡಿತವಾಗಿ ಹೆಚ್ಚಾಗುತ್ತದೆ. ಈ ಕೆಲಸವನ್ನು ಕೃಷಿ ತಜ್ಞರು, ಅಧಿಕಾರಿಗಳು, ನಬಾರ್ಡ್ ಮುಂತಾದ ಹಣಕಾಸು ಸಂಸ್ಥೆಗಳು ಮಾಡಬೇಕಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>