<h2>ಟಿ.ವಿ ಹಗರಣ: ಜಯಾ ಮುಕ್ತಿ</h2><p>ಚೆನ್ನೈ, ಮೇ 30 (ಪಿಟಿಐ) – 1995ರ ‘ಬಣ್ಣದ ಟಿ.ವಿ ಹಗರಣ’ದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಅಣ್ಣಾಡಿಎಂಕೆ ನಾಯಕಿ ಜಯಲಲಿತಾ ಅವರನ್ನು ಇಂದು ವಿಶೇಷ ನ್ಯಾಯಾಲಯ ಆರೋಪಮುಕ್ತ ಗೊಳಿಸಿ ಬಿಡುಗಡೆ ಮಾಡಿದೆ.</p><p>ಆದರೆ ಈಗ ಸಂಸತ್ ಸದಸ್ಯರಾಗಿರುವ ಜಯಲಲಿತಾರ ಮಾಜಿ ಸಚಿವ ಸಹೋದ್ಯೋಗಿ ಟಿ.ಎಂ. ಸೆಲ್ವಗಣಪತಿ ಮತ್ತು ಮೂವರು ಐಎಎಸ್ ಅಧಿಕಾರಿಗಳು ಸೇರಿದಂತೆ ಆರು ಮಂದಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಲಾಗಿದೆ.</p><p>ಸೆಲ್ವಗಣಪತಿ, ತಮಿಳುನಾಡು ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಎನ್.ಹರಿಭಾಸ್ಕರ್ ಮತ್ತಿತರ ಐವರನ್ನು ವೆಲ್ಲೂರು ಜೈಲಿಗೆ ಕಳುಹಿಸಲಾಯಿತು.</p><p>ಜಯಲಲಿತಾ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಗ್ರಾಮ ಪಂಚಾಯಿತಿಗಳಿಗೆ 45 ಸಾವಿರ ಟಿ.ವಿ ಸೆಟ್ಟುಗಳ ಖರೀದಿಗೆ ಸಂಬಂಧಿಸಿದಂತೆ ಜಯಲಲಿತಾ ಹಾಗೂ ಅವರ ನಂಬಿಕಸ್ಥ ಸಹಾಯಕಿ ಶಶಿಕಲಾ ನಟರಾಜನ್ ಅವರ ಪಾತ್ರ ಸಾಬೀತು ಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದ್ದು, ಈ ಪ್ರಕರಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದನ್ನು ಮಾತ್ರ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ.</p><h2>ಮೋಸದಾಟ: ಪೊಲೀಸರಿಂದ ‘ಮಾಯ’ವಾದ ಧ್ವನಿಮುದ್ರಿಕೆ</h2><p>ನವದೆಹಲಿ, ಮೇ 30 – ಕ್ರಿಕೆಟ್ ಆಟಗಾರರು ಮತ್ತು ಬುಕ್ಕಿಗಳ ನಡುವೆ ನಡೆದಿದ್ದ ಟೆಲಿಫೋನ್ ಸಂಭಾಷಣೆಯನ್ನು ಒಳಗೊಂಡಿದ್ದ ಧ್ವನಿಮುದ್ರಿಕೆ ‘ಕಳೆದುಹೋಗಿರುವುದು’ ಇನ್ನಿಲ್ಲದ ಊಹಾಪೋಹಗಳಿಗೆ ಎಡೆಕೊಟ್ಟಿದೆ.</p><p>1997ರ ಟೈಟಾನ್ ಕಪ್ ಕ್ರಿಕೆಟ್ ಟೂರ್ನಿಯ ಸಂದರ್ಭದಲ್ಲಿ ಈ ‘ಸಂಭಾಷಣೆ’ಯನ್ನು ಪೊಲೀಸರು ಧ್ವನಿ ಮುದ್ರಿಸಿಕೊಂಡು ತಮ್ಮಲ್ಲಿರಿಸಿಕೊಂಡಿದ್ದರು ಎಂದು ಮುಂಬೈನ ಉನ್ನತ ಪೊಲೀಸ್ ಅಧಿಕಾರಿ ಹೇಳಿದ್ದ ಹಿನ್ನೆಲೆಯಲ್ಲಿ, ಸಿಬಿಐ ಆ ಧ್ವನಿಮುದ್ರಿಕೆ ಬೇಕೆಂದು ಮುಂಬೈ ಪೊಲೀಸರಲ್ಲಿ ಮನವಿ ಮಾಡಿಕೊಂಡಿತ್ತು. ಇದಕ್ಕೆ ಮುಂಬೈ ಪೊಲೀಸರು ‘ನಮ್ಮಲ್ಲಿ ಅಂತಹ ಧ್ವನಿಮುದ್ರಿಕೆ ಇಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಟಿ.ವಿ ಹಗರಣ: ಜಯಾ ಮುಕ್ತಿ</h2><p>ಚೆನ್ನೈ, ಮೇ 30 (ಪಿಟಿಐ) – 1995ರ ‘ಬಣ್ಣದ ಟಿ.ವಿ ಹಗರಣ’ದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಅಣ್ಣಾಡಿಎಂಕೆ ನಾಯಕಿ ಜಯಲಲಿತಾ ಅವರನ್ನು ಇಂದು ವಿಶೇಷ ನ್ಯಾಯಾಲಯ ಆರೋಪಮುಕ್ತ ಗೊಳಿಸಿ ಬಿಡುಗಡೆ ಮಾಡಿದೆ.</p><p>ಆದರೆ ಈಗ ಸಂಸತ್ ಸದಸ್ಯರಾಗಿರುವ ಜಯಲಲಿತಾರ ಮಾಜಿ ಸಚಿವ ಸಹೋದ್ಯೋಗಿ ಟಿ.ಎಂ. ಸೆಲ್ವಗಣಪತಿ ಮತ್ತು ಮೂವರು ಐಎಎಸ್ ಅಧಿಕಾರಿಗಳು ಸೇರಿದಂತೆ ಆರು ಮಂದಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಲಾಗಿದೆ.</p><p>ಸೆಲ್ವಗಣಪತಿ, ತಮಿಳುನಾಡು ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಎನ್.ಹರಿಭಾಸ್ಕರ್ ಮತ್ತಿತರ ಐವರನ್ನು ವೆಲ್ಲೂರು ಜೈಲಿಗೆ ಕಳುಹಿಸಲಾಯಿತು.</p><p>ಜಯಲಲಿತಾ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಗ್ರಾಮ ಪಂಚಾಯಿತಿಗಳಿಗೆ 45 ಸಾವಿರ ಟಿ.ವಿ ಸೆಟ್ಟುಗಳ ಖರೀದಿಗೆ ಸಂಬಂಧಿಸಿದಂತೆ ಜಯಲಲಿತಾ ಹಾಗೂ ಅವರ ನಂಬಿಕಸ್ಥ ಸಹಾಯಕಿ ಶಶಿಕಲಾ ನಟರಾಜನ್ ಅವರ ಪಾತ್ರ ಸಾಬೀತು ಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದ್ದು, ಈ ಪ್ರಕರಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದನ್ನು ಮಾತ್ರ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ.</p><h2>ಮೋಸದಾಟ: ಪೊಲೀಸರಿಂದ ‘ಮಾಯ’ವಾದ ಧ್ವನಿಮುದ್ರಿಕೆ</h2><p>ನವದೆಹಲಿ, ಮೇ 30 – ಕ್ರಿಕೆಟ್ ಆಟಗಾರರು ಮತ್ತು ಬುಕ್ಕಿಗಳ ನಡುವೆ ನಡೆದಿದ್ದ ಟೆಲಿಫೋನ್ ಸಂಭಾಷಣೆಯನ್ನು ಒಳಗೊಂಡಿದ್ದ ಧ್ವನಿಮುದ್ರಿಕೆ ‘ಕಳೆದುಹೋಗಿರುವುದು’ ಇನ್ನಿಲ್ಲದ ಊಹಾಪೋಹಗಳಿಗೆ ಎಡೆಕೊಟ್ಟಿದೆ.</p><p>1997ರ ಟೈಟಾನ್ ಕಪ್ ಕ್ರಿಕೆಟ್ ಟೂರ್ನಿಯ ಸಂದರ್ಭದಲ್ಲಿ ಈ ‘ಸಂಭಾಷಣೆ’ಯನ್ನು ಪೊಲೀಸರು ಧ್ವನಿ ಮುದ್ರಿಸಿಕೊಂಡು ತಮ್ಮಲ್ಲಿರಿಸಿಕೊಂಡಿದ್ದರು ಎಂದು ಮುಂಬೈನ ಉನ್ನತ ಪೊಲೀಸ್ ಅಧಿಕಾರಿ ಹೇಳಿದ್ದ ಹಿನ್ನೆಲೆಯಲ್ಲಿ, ಸಿಬಿಐ ಆ ಧ್ವನಿಮುದ್ರಿಕೆ ಬೇಕೆಂದು ಮುಂಬೈ ಪೊಲೀಸರಲ್ಲಿ ಮನವಿ ಮಾಡಿಕೊಂಡಿತ್ತು. ಇದಕ್ಕೆ ಮುಂಬೈ ಪೊಲೀಸರು ‘ನಮ್ಮಲ್ಲಿ ಅಂತಹ ಧ್ವನಿಮುದ್ರಿಕೆ ಇಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>