<h2>ಹಿರಿಯ ಕಾಂಗ್ರೆಸ್ ನಾಯಕ ಸೀತಾರಾಂ ಕೇಸರಿ ನಿಧನ</h2>.<p>ನವದೆಹಲಿ, ಅ. 24 (ಯುಎನ್ಐ)– ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಅಸ್ವಸ್ಥಗೊಂಡು ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಮತ್ತು ಕೇಂದ್ರದ ಮಾಜಿ ಸಚಿವ ಸೀತಾರಾಂ ಕೇಸರಿ ಇಂದು ರಾತ್ರಿ ನಿಧನರಾದರು.</p>.<p>ಉಸಿರಾಟದ ತೊಂದರೆಯಿಂದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಕಳೆದ ಕೆಲವು ದಿನಗಳಿಂದ ಇರಿಸಲಾಗಿತ್ತು. ಅವರ ಆರೋಗ್ಯದಲ್ಲಿ ಏರುಪೇರು ಆಗುತ್ತಿದ್ದು, ಇಂದು ರಾತ್ರಿ ಉಸಿರಾಟ ನಿಂತು ಕೊನೆಯುಸಿರೆಳೆದರು. ಕೇಸರಿ ಅವರಿಗೆ 81 ವರ್ಷವಾಗಿತ್ತು.</p>.<h2>ಗೋವಾ: ಮೊಟ್ಟ ಮೊದಲ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ</h2>.<p>ಪಣಜಿ, ಅ. 24– ಮನೋಹರ್ ಪರಿಕ್ಕರ್ ನೇತೃತ್ವದಲ್ಲಿ ಗೋವಾದ ಮೊಟ್ಟ ಮೊದಲ ಬಿಜೆಪಿ ನೇತೃತ್ವದ 14 ಮಂದಿ ಸಚಿವ ಸಂಪುಟದ ಸಮ್ಮಿಶ್ರ ಸರ್ಕಾರ ಇಂದು ಅಧಿಕಾರಕ್ಕೆ ಬಂದಿತು.</p>.<p>ಬಿಜೆಪಿ ಶಾಸಕಾಂಗ ಪಕ್ಷದ ಮುಖಂಡ ಮನೋಹರ್ ಪರಿಕ್ಕರ್ ಅವರಿಗೆ ರಾಜ್ಯಪಾಲ ಮೊಹಮ್ಮದ್ ಫಜಲ್ ಅವರು, ಇಂದು ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಹಿರಿಯ ಕಾಂಗ್ರೆಸ್ ನಾಯಕ ಸೀತಾರಾಂ ಕೇಸರಿ ನಿಧನ</h2>.<p>ನವದೆಹಲಿ, ಅ. 24 (ಯುಎನ್ಐ)– ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಅಸ್ವಸ್ಥಗೊಂಡು ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಮತ್ತು ಕೇಂದ್ರದ ಮಾಜಿ ಸಚಿವ ಸೀತಾರಾಂ ಕೇಸರಿ ಇಂದು ರಾತ್ರಿ ನಿಧನರಾದರು.</p>.<p>ಉಸಿರಾಟದ ತೊಂದರೆಯಿಂದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಕಳೆದ ಕೆಲವು ದಿನಗಳಿಂದ ಇರಿಸಲಾಗಿತ್ತು. ಅವರ ಆರೋಗ್ಯದಲ್ಲಿ ಏರುಪೇರು ಆಗುತ್ತಿದ್ದು, ಇಂದು ರಾತ್ರಿ ಉಸಿರಾಟ ನಿಂತು ಕೊನೆಯುಸಿರೆಳೆದರು. ಕೇಸರಿ ಅವರಿಗೆ 81 ವರ್ಷವಾಗಿತ್ತು.</p>.<h2>ಗೋವಾ: ಮೊಟ್ಟ ಮೊದಲ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ</h2>.<p>ಪಣಜಿ, ಅ. 24– ಮನೋಹರ್ ಪರಿಕ್ಕರ್ ನೇತೃತ್ವದಲ್ಲಿ ಗೋವಾದ ಮೊಟ್ಟ ಮೊದಲ ಬಿಜೆಪಿ ನೇತೃತ್ವದ 14 ಮಂದಿ ಸಚಿವ ಸಂಪುಟದ ಸಮ್ಮಿಶ್ರ ಸರ್ಕಾರ ಇಂದು ಅಧಿಕಾರಕ್ಕೆ ಬಂದಿತು.</p>.<p>ಬಿಜೆಪಿ ಶಾಸಕಾಂಗ ಪಕ್ಷದ ಮುಖಂಡ ಮನೋಹರ್ ಪರಿಕ್ಕರ್ ಅವರಿಗೆ ರಾಜ್ಯಪಾಲ ಮೊಹಮ್ಮದ್ ಫಜಲ್ ಅವರು, ಇಂದು ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>