<p><strong>ಚೆನ್ನೈ, ನ. 30–</strong> ಬಂಗಾಳ ಕೊಲ್ಲಿಯಲ್ಲಿ ನಿನ್ನೆ ಸಂಜೆ ಕಾಣಿಸಿಕೊಂಡ ಚಂಡಮಾರುತ ಕಡಲೂರು ಮತ್ತು ಪುದುಚೇರಿ ಕರಾವಳಿ ಪ್ರದೇಶಗಳಲ್ಲಿ ಭಾರಿ ಹಾನಿ ಉಂಟು ಮಾಡಿದ್ದು, ಇದುವರೆಗೆ 12 ಮಂದಿಯನ್ನು ಬಲಿ ತೆಗೆದುಕೊಂಡಿದೆ.</p>.<p>ಚಂಡಮಾರುತದ ಪರಿಣಾಮ ಭಾರೀ ಮಳೆ ಮತ್ತು ಬಿರುಗಾಳಿ ಉಂಟಾಗಿ ಪುದುಚೇರಿಯಲ್ಲಿ ಇಬ್ಬರು ಸತ್ತಿದ್ದರೆ, ತಮಿಳುನಾಡಿನಲ್ಲಿ 10 ಮಂದಿ ಮೃತಪಟ್ಟಿದ್ದಾರೆ.</p>.<p>ವಾಯುಭಾರ ಕುಸಿತ ಪಶ್ಚಿಮಾಭಿಮುಖವಾಗಿದ್ದು, ಬಂಗಾಳ ಕೊಲ್ಲಿಯಲ್ಲೇ ಸ್ಥಿರಗೊಳ್ಳುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಗಳ ಅವಧಿಯಲ್ಲಿ ಈ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಂಭವವಿದೆ.</p>.<h2>ಲೇಖಕಿ ಜಯಲಕ್ಷ್ಮೀಗೆ ‘ದಾನಚಿಂತಾಮಣಿ’ ಪ್ರಶಸ್ತಿ</h2>.<p>ಬೆಂಗಳೂರು, ನ. 30– ಕನ್ನಡದ ಹಿರಿಯ ಲೇಖಕಿ ಜಯಲಕ್ಷ್ಮೀ ಶ್ರೀನಿವಾಸನ್ ಅವರಿಗೆ ಪ್ರಸಕ್ತ ಸಾಲಿನ ‘ದಾನಚಿಂತಾಮಣಿ’ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಇಂದು ಪ್ರದಾನ ಮಾಡಿದೆ.</p>.<p>ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರವಾದ ಸಾಧನೆ ಮಾಡಿದ ಮಹಿಳೆಯರಿಗೆ ರಾಜ್ಯ ಸರ್ಕಾರ ದಾನಚಿಂತಾಮಣಿ ಅತ್ತಿಮಬ್ಬೆ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ, ನ. 30–</strong> ಬಂಗಾಳ ಕೊಲ್ಲಿಯಲ್ಲಿ ನಿನ್ನೆ ಸಂಜೆ ಕಾಣಿಸಿಕೊಂಡ ಚಂಡಮಾರುತ ಕಡಲೂರು ಮತ್ತು ಪುದುಚೇರಿ ಕರಾವಳಿ ಪ್ರದೇಶಗಳಲ್ಲಿ ಭಾರಿ ಹಾನಿ ಉಂಟು ಮಾಡಿದ್ದು, ಇದುವರೆಗೆ 12 ಮಂದಿಯನ್ನು ಬಲಿ ತೆಗೆದುಕೊಂಡಿದೆ.</p>.<p>ಚಂಡಮಾರುತದ ಪರಿಣಾಮ ಭಾರೀ ಮಳೆ ಮತ್ತು ಬಿರುಗಾಳಿ ಉಂಟಾಗಿ ಪುದುಚೇರಿಯಲ್ಲಿ ಇಬ್ಬರು ಸತ್ತಿದ್ದರೆ, ತಮಿಳುನಾಡಿನಲ್ಲಿ 10 ಮಂದಿ ಮೃತಪಟ್ಟಿದ್ದಾರೆ.</p>.<p>ವಾಯುಭಾರ ಕುಸಿತ ಪಶ್ಚಿಮಾಭಿಮುಖವಾಗಿದ್ದು, ಬಂಗಾಳ ಕೊಲ್ಲಿಯಲ್ಲೇ ಸ್ಥಿರಗೊಳ್ಳುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಗಳ ಅವಧಿಯಲ್ಲಿ ಈ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಂಭವವಿದೆ.</p>.<h2>ಲೇಖಕಿ ಜಯಲಕ್ಷ್ಮೀಗೆ ‘ದಾನಚಿಂತಾಮಣಿ’ ಪ್ರಶಸ್ತಿ</h2>.<p>ಬೆಂಗಳೂರು, ನ. 30– ಕನ್ನಡದ ಹಿರಿಯ ಲೇಖಕಿ ಜಯಲಕ್ಷ್ಮೀ ಶ್ರೀನಿವಾಸನ್ ಅವರಿಗೆ ಪ್ರಸಕ್ತ ಸಾಲಿನ ‘ದಾನಚಿಂತಾಮಣಿ’ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಇಂದು ಪ್ರದಾನ ಮಾಡಿದೆ.</p>.<p>ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರವಾದ ಸಾಧನೆ ಮಾಡಿದ ಮಹಿಳೆಯರಿಗೆ ರಾಜ್ಯ ಸರ್ಕಾರ ದಾನಚಿಂತಾಮಣಿ ಅತ್ತಿಮಬ್ಬೆ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>