<h2>ಗುಂಡಿನ ಕಾಳಗ ನಿಂತರೆ ಪಾಕ್ ಜತೆ ಮಾತುಕತೆ</h2>.<p><strong>ಬೆಂಗಳೂರು, ಡಿ. 3–</strong> ಪಾಕಿಸ್ತಾನ ಉಗ್ರಗಾಮಿಗಳನ್ನು ಭಾರತದೊಳಕ್ಕೆ ನುಗ್ಗಿಸುವುದನ್ನು ಹಾಗೂ ನಿಜವಾದ ಅರ್ಥದಲ್ಲಿ ಗಡಿಭಾಗದಲ್ಲಿ ಗುಂಡಿನ ದಾಳಿ ನಡೆಸುವುದನ್ನು ನಿಲ್ಲಿಸಿದರೆ ಮಾತ್ರ ಭಾರತ ಆ ದೇಶ ದೊಂದಿಗೆ ಮಾತುಕತೆಯನ್ನು ಪುನರಾರಂಭಿಸುತ್ತದೆ ಎಂಬ ಇಂಗಿತವನ್ನು ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ವ್ಯಕ್ತಪಡಿಸಿದರು.</p>.<p>ಪಾಕಿಸ್ತಾನದ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಅತ್ಯಂತ ಸಂಯಮದಿಂದ ಇರುವಂತೆ ಸೇನೆಗೆ ಆದೇಶ ನೀಡಿದೆ ಎಂದು ವರದಿಯಾಗಿರುವುದರ ಬಗ್ಗೆ ರಕ್ಷಣಾ ಸಚಿವರು ಪ್ರತಿಕ್ರಿಯೆ ವ್ಯಕ್ತಪಡಿಸಿ, ಸೂಕ್ತವಾದ ಕಾಲದಲ್ಲಿ ಪಾಕಿಸ್ತಾನ ಈ ಕ್ರಮ ತೆಗೆದುಕೊಂಡಿದೆ ಎಂದರು.</p>.<h2>ಅಂಗವಿಕಲರಿಗೆ ಬಸ್ಗಳಲ್ಲಿ ರಿಯಾಯಿತಿ ಶೀಘ್ರ</h2>.<p><strong>ಬೆಂಗಳೂರು, ಡಿ. 3–</strong> ಅಂಗವಿಕಲರಿಗೆ ರಾಜ್ಯ ಸಾರಿಗೆ ಬಸ್ಗಳಲ್ಲಿ ರಿಯಾಯಿತಿ ನೀಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೋಟಮ್ಮ ಇಂದು ಇಲ್ಲಿ ಹೇಳಿದರು.</p>.<p>ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಏರ್ಪಡಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಗುಂಡಿನ ಕಾಳಗ ನಿಂತರೆ ಪಾಕ್ ಜತೆ ಮಾತುಕತೆ</h2>.<p><strong>ಬೆಂಗಳೂರು, ಡಿ. 3–</strong> ಪಾಕಿಸ್ತಾನ ಉಗ್ರಗಾಮಿಗಳನ್ನು ಭಾರತದೊಳಕ್ಕೆ ನುಗ್ಗಿಸುವುದನ್ನು ಹಾಗೂ ನಿಜವಾದ ಅರ್ಥದಲ್ಲಿ ಗಡಿಭಾಗದಲ್ಲಿ ಗುಂಡಿನ ದಾಳಿ ನಡೆಸುವುದನ್ನು ನಿಲ್ಲಿಸಿದರೆ ಮಾತ್ರ ಭಾರತ ಆ ದೇಶ ದೊಂದಿಗೆ ಮಾತುಕತೆಯನ್ನು ಪುನರಾರಂಭಿಸುತ್ತದೆ ಎಂಬ ಇಂಗಿತವನ್ನು ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ವ್ಯಕ್ತಪಡಿಸಿದರು.</p>.<p>ಪಾಕಿಸ್ತಾನದ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಅತ್ಯಂತ ಸಂಯಮದಿಂದ ಇರುವಂತೆ ಸೇನೆಗೆ ಆದೇಶ ನೀಡಿದೆ ಎಂದು ವರದಿಯಾಗಿರುವುದರ ಬಗ್ಗೆ ರಕ್ಷಣಾ ಸಚಿವರು ಪ್ರತಿಕ್ರಿಯೆ ವ್ಯಕ್ತಪಡಿಸಿ, ಸೂಕ್ತವಾದ ಕಾಲದಲ್ಲಿ ಪಾಕಿಸ್ತಾನ ಈ ಕ್ರಮ ತೆಗೆದುಕೊಂಡಿದೆ ಎಂದರು.</p>.<h2>ಅಂಗವಿಕಲರಿಗೆ ಬಸ್ಗಳಲ್ಲಿ ರಿಯಾಯಿತಿ ಶೀಘ್ರ</h2>.<p><strong>ಬೆಂಗಳೂರು, ಡಿ. 3–</strong> ಅಂಗವಿಕಲರಿಗೆ ರಾಜ್ಯ ಸಾರಿಗೆ ಬಸ್ಗಳಲ್ಲಿ ರಿಯಾಯಿತಿ ನೀಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೋಟಮ್ಮ ಇಂದು ಇಲ್ಲಿ ಹೇಳಿದರು.</p>.<p>ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಏರ್ಪಡಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>