<h2>ಮಮತಾ ರಾಜೀನಾಮೆ ಒಪ್ಪಲು ಪ್ರಧಾನಿ ನಕಾರ</h2>.<p><strong>ನವದೆಹಲಿ, ಡಿ. 4 –</strong> ಪಂಜಾಬ್ ರೈಲು ದುರಂತದ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು, ಇಂದು ಬೆಳಿಗ್ಗೆ ಕೇಂದ್ರ ಸಚಿವ ಸಂಪುಟಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದರು. ಆದರೆ, ರಾಜೀನಾಮೆ ಸ್ವೀಕರಿಸಲು ಪ್ರಧಾನಿ ನಿರಾಕರಿಸಿದ್ದು, ಹುದ್ದೆಯಲ್ಲಿ ಮುಂದುವರಿಯಲು ಮಮತಾಗೆ ಸೂಚಿಸಿದ್ದಾರೆ.</p>.<p>ಮಮತಾ ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಇಂದು ಬೆಳಿಗ್ಗೆ 7.30ಕ್ಕೆ ರವಾನಿಸಿದರು. ಅದನ್ನು ಅಂಗೀಕರಿಸಲು ನಿರಾಕರಿಸಿದ್ದಾರೆ.</p>.<h2>‘ಆಡಳಿತದಲ್ಲಿ ಪಕ್ಷದ ವರಿಷ್ಠರ ಹಸ್ತಕ್ಷೇಪ ಇಲ್ಲ’</h2>.<p><strong>ಬೆಂಗಳೂರು, ಡಿ. 4–</strong> ‘ಗುಲಾಂ ನಬಿ ಅಜಾದ್ ಸೇರಿದಂತೆ ಕಾಂಗ್ರೆಸ್ನ ರಾಷ್ಟ್ರೀಯ ಘಟಕದ ಪದಾಧಿಕಾರಿಗಳು ಚುನಾವಣಾ ಪ್ರಣಾಳಿಕೆ ಪರಿಶೀಲನೆ ನೆಪದಲ್ಲಿ ರಾಜ್ಯ ಸರ್ಕಾರದ ಆಡಳಿತದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ’ ಎಂದು ಮುಖ್ಯಮಂತ್ರಿ <br>ಎಸ್.ಎಂ. ಕೃಷ್ಣ ಇಂದು ಹೇಳಿದರು.</p>.<p>ವಿದ್ಯಾರ್ಥಿ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆಗೆ ಮುನ್ನ ಪ್ರಕಟಿಸಿದ್ದ ಪ್ರಣಾಳಿಕೆಯ ಎಷ್ಟು ಭಾಗವನ್ನು ಅನುಷ್ಠಾನಕ್ಕೆ ತಂದಿದ್ದೇವೆ ಎಂಬುದನ್ನು ಕಂಡುಕೊಳ್ಳಲು ಪರಿಶೀಲನಾ ಕಾರ್ಯ ನಡೆಸಲಾಗಿದೆ. ಇದೊಂದು ಅತ್ಯಂತ ಆರೋಗ್ಯಕರ ಬೆಳವಣಿಗೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಮಮತಾ ರಾಜೀನಾಮೆ ಒಪ್ಪಲು ಪ್ರಧಾನಿ ನಕಾರ</h2>.<p><strong>ನವದೆಹಲಿ, ಡಿ. 4 –</strong> ಪಂಜಾಬ್ ರೈಲು ದುರಂತದ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು, ಇಂದು ಬೆಳಿಗ್ಗೆ ಕೇಂದ್ರ ಸಚಿವ ಸಂಪುಟಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದರು. ಆದರೆ, ರಾಜೀನಾಮೆ ಸ್ವೀಕರಿಸಲು ಪ್ರಧಾನಿ ನಿರಾಕರಿಸಿದ್ದು, ಹುದ್ದೆಯಲ್ಲಿ ಮುಂದುವರಿಯಲು ಮಮತಾಗೆ ಸೂಚಿಸಿದ್ದಾರೆ.</p>.<p>ಮಮತಾ ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಇಂದು ಬೆಳಿಗ್ಗೆ 7.30ಕ್ಕೆ ರವಾನಿಸಿದರು. ಅದನ್ನು ಅಂಗೀಕರಿಸಲು ನಿರಾಕರಿಸಿದ್ದಾರೆ.</p>.<h2>‘ಆಡಳಿತದಲ್ಲಿ ಪಕ್ಷದ ವರಿಷ್ಠರ ಹಸ್ತಕ್ಷೇಪ ಇಲ್ಲ’</h2>.<p><strong>ಬೆಂಗಳೂರು, ಡಿ. 4–</strong> ‘ಗುಲಾಂ ನಬಿ ಅಜಾದ್ ಸೇರಿದಂತೆ ಕಾಂಗ್ರೆಸ್ನ ರಾಷ್ಟ್ರೀಯ ಘಟಕದ ಪದಾಧಿಕಾರಿಗಳು ಚುನಾವಣಾ ಪ್ರಣಾಳಿಕೆ ಪರಿಶೀಲನೆ ನೆಪದಲ್ಲಿ ರಾಜ್ಯ ಸರ್ಕಾರದ ಆಡಳಿತದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ’ ಎಂದು ಮುಖ್ಯಮಂತ್ರಿ <br>ಎಸ್.ಎಂ. ಕೃಷ್ಣ ಇಂದು ಹೇಳಿದರು.</p>.<p>ವಿದ್ಯಾರ್ಥಿ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆಗೆ ಮುನ್ನ ಪ್ರಕಟಿಸಿದ್ದ ಪ್ರಣಾಳಿಕೆಯ ಎಷ್ಟು ಭಾಗವನ್ನು ಅನುಷ್ಠಾನಕ್ಕೆ ತಂದಿದ್ದೇವೆ ಎಂಬುದನ್ನು ಕಂಡುಕೊಳ್ಳಲು ಪರಿಶೀಲನಾ ಕಾರ್ಯ ನಡೆಸಲಾಗಿದೆ. ಇದೊಂದು ಅತ್ಯಂತ ಆರೋಗ್ಯಕರ ಬೆಳವಣಿಗೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>