ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಭಾನುವಾರ 11 ಮೇ 1997

Last Updated 10 ಮೇ 2022, 23:00 IST
ಅಕ್ಷರ ಗಾತ್ರ

ಬಿ.ಎಲ್‌.ಶಂಕರ್‌ ರಾಜ್ಯ ಜನತಾ ದಳ ಅಧ್ಯಕ್ಷ

ಬೆಂಗಳೂರು, ಮೇ.10– ಭಿನ್ನಮತೀಯರ ತೀವ್ರ ಅಸಮಾಧಾನದ ನಡುವೆ ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಅವರು ಚುನಾವಣಾ ಕಣದಲ್ಲಿದ್ದ ಇಬ್ಬರು ಅಭ್ಯರ್ಥಿಗಳ ಮನವೊಲಿಸಿದ ಫಲವಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆಪ್ತ ಸಂಸದ ಬಿ.ಎಲ್‌.ಶಂಕರ್‌ ಅವರು ರಾಜ್ಯ ಜನತಾದಳದ ಅಧ್ಯಕ್ಷರಾಗಿ ಅವಿರೋಧವಾಗಿ ಇಂದು ಆಯ್ಕೆಯಾದರು.

ಈ ಆಯ್ಕೆಯೊಂದಿಗೆ ಕಳೆದ ಒಂದು ವಾರದಿಂದ ಕಾಡಿದ್ದ ಪಕ್ಷದಲ್ಲಿನ ಗೊಂದಲಕ್ಕೆ ಅಂತಿಮ ತೆರೆ ಎಳೆದಂತಾಗಿದೆ.

ಭಿನ್ನಮತೀಯ ಮುಖಂಡ ಹಾಗೂ ಮಾಜಿ ಸಚಿವ ಬಿ.ಆರ್‌.ಯಾವಗಲ್‌ ಹಾಗೂ ಮಾಜಿ ಶಾಸಕ ಬಿ.ಆರ್‌.ನೀಲಕಂಠಪ್ಪ ಅವರು ಸ್ಪರ್ಧೆಯಿಂದ ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಂಡರು.

ಇರಾನ್‌ ಭೂಕಂಪ: 1 ಸಾವಿರ ಸಾವು

ದುಬೈ, ಮೇ.10 (ಪಿಟಿಐ)– ಇರಾನಿನ ಖೋರಸಾನ್‌ ಪ್ರಾಂತ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭಾರಿ ಭೂಕಂಪದಲ್ಲಿ ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT