ಒಟ್ಟು ಹತ್ತು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಂತಿಮವಾಗಿ 49 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದರು. ಕರ್ನಾಟಕದಿಂದ 9 ಮಂದಿ ಮುಖಂಡರು ನಾಮಪತ್ರ ಸಲ್ಲಿಸಿದ್ದರಾದರೂ ಕೇಂದ್ರದ ಮಾಜಿ ಸಚಿವರಾದ ಶಂಕರಾನಂದ, ಎಂ.ವಿ.ಚಂದ್ರಶೇಖರಮೂರ್ತಿ ಹಾಗೂ
ಎಸ್.ಎಂ.ಕೃಷ್ಣ ಅವರು ಹಿಂತೆಗೆದು ಕೊಂಡಿದ್ದರಿಂದ ಅಂತಿಮವಾಗಿ ಬಿ.ಜನಾರ್ದನ ಪೂಜಾರಿ, ಮಾರ್ಗರೆಟ್ ಆಳ್ವ, ಸಿ.ಕೆ.ಜಾಫರ್ ಷರೀಫ್, ಎಚ್.ಹನುಮಂತಪ್ಪ, ಎಸ್.ಬಂಗಾರಪ್ಪ ಹಾಗೂ ವೀರಪ್ಪ ಮೊಯಿಲಿ ಕಣದಲ್ಲಿ ಉಳಿದಿದ್ದರು. ಆದರೆ ಇಂದು ಫಲಿತಾಂಶ ಪ್ರಕಟವಾದಾಗ ಎಲ್ಲಾ ಆರು ಮಂದಿಯೂ ಬಹಳ ಕಡಿಮೆ ಪ್ರಮಾಣದಲ್ಲಿ ಮತಗಳನ್ನು ಪಡೆದಿರುವುದು ಬಹಿರಂಗವಾಯಿತು. ರಾಜ್ಯದ ಮುಖಂಡ ರಲ್ಲಿನ ಗುಂಪುಗಾರಿಕೆ ಹಾಗೂ ಒಳಜಗಳವೇ ಹೆಚ್ಚು ಮಂದಿ ಸ್ಪರ್ಧಿಸಲು ಕಾರಣವಾಗಿದ್ದು, ಒಮ್ಮತದ ಅಭ್ಯರ್ಥಿ ಆಯ್ಕೆಯ ಕೊರತೆಯೇ ಸೋಲಿಗೆ ಕಾರಣವೆನ್ನಲಾಗಿದೆ.