<p><strong>ಆಲಮಟ್ಟಿ ವಿವಾದ: ಸೌಹಾರ್ದ ಇತ್ಯರ್ಥಕ್ಕೆ ಪಟೇಲ್ ಒಲವು</strong></p>.<p><strong>ಬಳ್ಳಾರಿ, ನ. 4–</strong> ಆಲಮಟ್ಟಿ ಕುರಿತಂತೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಸಂಘರ್ಷದ ಪ್ರಶ್ನೆಯೇ ಇಲ್ಲ, ಈ ಪ್ರಶ್ನೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದೇ ತಮ್ಮ ಬಯಕೆ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ತಿಳಿಸಿದರು.</p>.<p>ಹಂಪಿ ಉತ್ಸವಕ್ಕೆ ಆಗಮಿಸಿದ್ದ ಅವರು ಪತ್ರಕರ್ತರಿಗೆ ಈ ವಿಷಯ ತಿಳಿಸಿದರು. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವ ಆರ್ಥಿಕ ನೆರವಿನ ಬಗ್ಗೆ ಬಾಬು ಆಕ್ಷೇಪಿಸುವುದು ಅನಗತ್ಯ. ಅವರಿಗೂ ಈ ನೆರವು ದೊರೆಯುತ್ತಿದೆ ಎಂದರು.</p>.<p><strong>ಭದ್ರತಾ ವೆಚ್ಚ ನೀಡಲು ಎಬಿಸಿಎಲ್ ಒಪ್ಪಿಗೆ</strong></p>.<p><strong>ಬೆಂಗಳೂರು, ನ. 4– </strong>ವಿಶ್ವಸುಂದರಿ ಸ್ಪರ್ಧೆಯ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಗೆ ತಗಲುವ ಖರ್ಚು ವೆಚ್ಚವನ್ನು ನೀಡಲು ಅಮಿತಾಭ್ ಬಚ್ಚನ್ ಕಾರ್ಪೊರೇಷನ್ ಲಿಮಿಟೆಡ್ (ಎಬಿಸಿಎಲ್) ಒಪ್ಪಿದೆ. ಅಲ್ಲದೆ ಸ್ಪರ್ಧೆಯ ಬಗ್ಗೆ ಎದ್ದಿರುವ ವಿರೋಧದ ಹಿನ್ನೆಲೆಯಲ್ಲಿ ಮೂರು ಪ್ರಮುಖ ಕಾರ್ಯಕ್ರಮಗಳನ್ನು ನಗರದ ಹೊರವಲಯಕ್ಕೆ ಸ್ಥಳಾಂತರಿಸಲು ತೀರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮಟ್ಟಿ ವಿವಾದ: ಸೌಹಾರ್ದ ಇತ್ಯರ್ಥಕ್ಕೆ ಪಟೇಲ್ ಒಲವು</strong></p>.<p><strong>ಬಳ್ಳಾರಿ, ನ. 4–</strong> ಆಲಮಟ್ಟಿ ಕುರಿತಂತೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಸಂಘರ್ಷದ ಪ್ರಶ್ನೆಯೇ ಇಲ್ಲ, ಈ ಪ್ರಶ್ನೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದೇ ತಮ್ಮ ಬಯಕೆ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ತಿಳಿಸಿದರು.</p>.<p>ಹಂಪಿ ಉತ್ಸವಕ್ಕೆ ಆಗಮಿಸಿದ್ದ ಅವರು ಪತ್ರಕರ್ತರಿಗೆ ಈ ವಿಷಯ ತಿಳಿಸಿದರು. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವ ಆರ್ಥಿಕ ನೆರವಿನ ಬಗ್ಗೆ ಬಾಬು ಆಕ್ಷೇಪಿಸುವುದು ಅನಗತ್ಯ. ಅವರಿಗೂ ಈ ನೆರವು ದೊರೆಯುತ್ತಿದೆ ಎಂದರು.</p>.<p><strong>ಭದ್ರತಾ ವೆಚ್ಚ ನೀಡಲು ಎಬಿಸಿಎಲ್ ಒಪ್ಪಿಗೆ</strong></p>.<p><strong>ಬೆಂಗಳೂರು, ನ. 4– </strong>ವಿಶ್ವಸುಂದರಿ ಸ್ಪರ್ಧೆಯ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಗೆ ತಗಲುವ ಖರ್ಚು ವೆಚ್ಚವನ್ನು ನೀಡಲು ಅಮಿತಾಭ್ ಬಚ್ಚನ್ ಕಾರ್ಪೊರೇಷನ್ ಲಿಮಿಟೆಡ್ (ಎಬಿಸಿಎಲ್) ಒಪ್ಪಿದೆ. ಅಲ್ಲದೆ ಸ್ಪರ್ಧೆಯ ಬಗ್ಗೆ ಎದ್ದಿರುವ ವಿರೋಧದ ಹಿನ್ನೆಲೆಯಲ್ಲಿ ಮೂರು ಪ್ರಮುಖ ಕಾರ್ಯಕ್ರಮಗಳನ್ನು ನಗರದ ಹೊರವಲಯಕ್ಕೆ ಸ್ಥಳಾಂತರಿಸಲು ತೀರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>