ಹೈದರಾಬಾದ್, ನ. 8 (ಪಿಟಿಐ)– ಆಂಧ್ರಪ್ರದೇಶದ ಕರಾವಳಿ ಪ್ರದೇಶದಲ್ಲಿ ಬೀಸಿದ ಭೀಕರ ಚಂಡಮಾರುತದಲ್ಲಿ ಮೃತಪಟ್ಟವರ ಸಂಖ್ಯೆ ಒಂದು ಸಾವಿರಕ್ಕೂ ಹೆಚ್ಚಿರುವ ಸಾಧ್ಯತೆಗಳಿದ್ದು, ಕನಿಷ್ಠ ಎರಡು ಸಾವಿರ ಕೋಟಿ ರೂಪಾಯಿಗಳ ನಷ್ಟ ಸಂಭವಿಸಬಹುದು ಎಂದು ಹಾನಿಗೀಡಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಇಂದು ಇಲ್ಲಿ ಪ್ರಕಟಿಸಿದರು.