ನವದೆಹಲಿ, ನ. 14– ಇಲ್ಲಿನ ಜಂತರ್ ಮಂತರ್ ರಸ್ತೆಯಲ್ಲಿ ಸಂಸ್ಥಾ ಕಾಂಗ್ರೆಸ್ ವಶದಲ್ಲಿದ್ದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಚೇರಿಯ ಮೇಲೆ ಆಡಳಿತ ಕಾಂಗ್ರೆಸಿನ ಕೆಲವು ಮಂದಿ ಅಧಿಕಾರ ವರ್ಗದವರು ಮತ್ತು ಕಾರ್ಯಕರ್ತರು ಶನಿವಾರ ದಾಳಿ ಮಾಡಿ, ಅದನ್ನು ಬಲಾತ್ಕಾರದಿಂದ ಸ್ವಾಧೀನ ಪಡಿಸಿಕೊಂಡುದಕ್ಕಾಗಿ ಪ್ರಮುಖ ರಾಜಕೀಯ ನಾಯಕರು ಇಂದು ಖಂಡಿಸಿದ್ದಾರೆ.