ಬೆಂಗಳೂರು, ಡಿ. 28– ಜನತಾದಳದಲ್ಲಿನ ಕೆಲವು ನಾಯಕರ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಗಳು ಬಗೆಹರಿಯುವ ವಿಶ್ವಾಸ ವ್ಯಕ್ತಪಡಿಸಿದ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಮಾನವ ಸಂಪನ್ಮೂಲ ಸಚಿವ ಎಸ್.ಆರ್. ಬೊಮ್ಮಾಯಿ ಅವರು, ತಮ್ಮ ಪಕ್ಷವು ಮುಂದಿನ ಲೋಕಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಲಿದೆ ಎಂದು ಇಂದು ಇಲ್ಲಿ ನುಡಿದರು.