ನವದೆಹಲಿ, ಮೇ 22 (ಯುಎನ್ಐ)– ಕೇಂದ್ರದಲ್ಲಿ ಸರ್ಕಾರ ರಚಿಸಲು ಸಂಯುಕ್ತ ರಂಗಕ್ಕೆ ಬೆಂಬಲ ನೀಡುವ ಬಗ್ಗೆ ಪಕ್ಷದ ಕೆಲವು ರಾಜ್ಯ ಘಟಕಗಳು ವಿರೋಧ ವ್ಯಕ್ತಪಡಿಸಿದ್ದರೂ ಅದನ್ನು ಕಡೆಗಣಿಸಿ ಸಂಯುಕ್ತ ರಂಗ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
‘ವಿರೋಧ ಅನಿರೀಕ್ಷಿತ ಅಲ್ಲ. ಆದರೆ ಈಗ ನಾವು ಅನಿಶ್ಚಿತ ಸ್ಥಿತಿಯನ್ನು ಎದುರಿಸುತ್ತಿರುವುದರಿಂದ ಇಂತಹ ಘಟನೆಗಳು ನಡೆಯುತ್ತವೆ’ ಎಂದು ಪಕ್ಷದ ವಕ್ತಾರ ವಿ.ಎನ್. ಗಾಡ್ಗೀಳ್ ಅವರು ಹೇಳಿದರು.