ನವದೆಹಲಿ, ಏ. 7– ಪ್ರಧಾನಿ ಎಚ್.ಡಿ. ದೇವೇಗೌಡ ಅವರು ವಿಶ್ವಾಸ ಮತ ಪಡೆಯುವ ಮುನ್ನ ಪದತ್ಯಾಗ ಮಾಡಿದರೆ ಕಾಂಗ್ರೆಸ್ ಮುಂದಿನ ಪರ್ಯಾಯ ವ್ಯವಸ್ಥೆಯ ಬಗ್ಗೆ ಸಂಯುಕ್ತ ರಂಗದ ಜತೆ ಯಾವುದೇ ಷರತ್ತಿಲ್ಲದೆ ಮಾತುಕತೆ ನಡೆಸಲು ಬದ್ಧವಾಗಿರುವುದಾಗಿ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ ಕೆ. ಕರುಣಾಕರನ್ ಅವರು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.