ಬೆಂಗಳೂರು, ಏ.9– ‘ಬಾಗಲಕೋಟೆ, ಚಾಮರಾಜನಗರ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ ಮತ್ತು ಉಡುಪಿ ಈ ಏಳು ಹೊಸ ಜಿಲ್ಲೆಗಳು ಬರುವ ಕನ್ನಡ ರಾಜ್ಯೋತ್ಸವ ದಿನದಂದು ಅಸ್ತಿತ್ವಕ್ಕೆ ಬರಲಿವೆ’ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಯುಗಾದಿ ಹಬ್ಬದ ದಿನವಾದ ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದರು.‘ಇನ್ನೂ ಎರಡು ಜಿಲ್ಲೆಗಳನ್ನು ರಚಿಸಲು ಸರ್ಕಾರ ಬದ್ಧವಾಗಿದೆ’ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.