ಮಾಜಿ ಪ್ರಧಾನಿ ಎ.ಬಿ. ವಾಜಪೇಯಿ ಅವರ ನಿವಾಸದಲ್ಲಿ ಸಭೆ ಸೇರಿದ್ದ ಬಿಜೆಪಿ ಹಿರಿಯ ನಾಯಕರ ಸಭೆ, ಮುಖ್ಯಮಂತ್ರಿ ಹುದ್ದೆಗೆ ಕಲ್ಯಾಣ್ ಸಿಂಗ್ ಅವರೇ ಪಕ್ಷದ ಅಭ್ಯರ್ಥಿ ಎಂಬ ನಿರ್ಧಾರಕ್ಕೆ ಅಂಟಿ ಕೊಂಡಿದೆ. ಬಿಜೆಪಿ ಅಧ್ಯಕ್ಷ ಎಲ್.ಕೆ. ಅಡ್ವಾಣಿ, ಮಾಜಿ ಅಧ್ಯಕ್ಷ ಮುರಳಿ ಮನೋಹರ ಜೋಷಿ, ಉತ್ತರಪ್ರದೇಶದ ಬಿಜೆಪಿ ಅಧ್ಯಕ್ಷ ರಾಜನಾಥ ಸಿಂಗ್, ಪಕ್ಷದ ಮುಖಂಡರಾದ ಕಲ್ರಾಜ್ ಮಿಶ್ರಾ, ಲಾಲ್ಜಿ ಟಂಡನ್ ಭಾಗವಹಿಸಿದ್ದರು.