ನವದೆಹಲಿ, ಸೆ.12 (ಯುಎನ್ಐ, ಪಿಟಿಐ)– ಬಹುಕೋಟಿ ಜೆಎಂಎಂ ಲಂಚ ಪ್ರಕರಣದಲ್ಲಿ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್, ಕೇಂದ್ರದ ನಾಲ್ವರು ಮಾಜಿ ಸಚಿವರು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೋಯ್ಲಿ ಅವರು ಸೇರಿ ಇಬ್ಬರು ಮುಖ್ಯಮಂತ್ರಿಗಳು ಮತ್ತು ಇತರ 11 ಜನರ ವಿರುದ್ಧ ಆರೋಪ ಸಿದ್ಧಪಡಿಸಿದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ದೆಹಲಿ ಹೈಕೋರ್ಟ್ ಸಮರ್ಥಿಸಿ ಅವರ ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿಯನ್ನು ತಳ್ಳಿ ಹಾಕಿತು.