ಬೆಂಗಳೂರು, ಜ. 6– ಕಾವೇರಿ ನೀರು ಹಂಚಿಕೆ ಸಂಬಂಧದಲ್ಲಿ ಉಭಯ ರಾಜ್ಯಗಳ ನಡುವಿನ ಮಾತುಕತೆ ವಿಫಲವಾಗಲು ಕಾರಣವಾಗಿರುವ ತಮಿಳುನಾಡು ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯದ ವಿರೋಧ ಪಕ್ಷಗಳ ನಾಯಕರು ಕೇಂದ್ರ ಸರ್ಕಾರವನ್ನು ಆಗ್ರಹಪಡಿಸಿದ್ದರೆ, ವಿವಾದ ಬಗೆಹರಿಸಲು ಮಧ್ಯ ಪ್ರವೇಶಿಸುವಂತೆ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಮನವಿ ಮಾಡಿದ್ದಾರೆ.