ಬದೌನ್ (ಉತ್ತರ ಪ್ರದೇಶ), ಜುಲೈ 9 (ಪಿಟಿಐ)– ಮೇವು ಹಗರಣದಲ್ಲಿ ಸಿಬಿಐ ಆರೋಪ ಪಟ್ಟಿ ಸಲ್ಲಿಸಿರುವುದರಿಂದ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕೆಂದು ಬಿಹಾರದ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಪ್ರಧಾನಿ ಐ.ಕೆ. ಗುಜ್ರಾಲ್ ಇಂದು ಕರೆ ನೀಡಿದರು.
ಎಡ ಪಕ್ಷಗಳ ಜತೆ ಈ ವಿಷಯದಲ್ಲಿ ಯಾವುದೇ ಭಿನ್ನಾಭಿಪ್ರಾಯವನ್ನು ತಾವು ಹೊಂದಿಲ್ಲ ಎಂದು ಅವರು ಹೇಳಿದರು.