ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿಯಲ್ಲಿ 25 ವರ್ಷಗಳ ಹಿಂದೆ: ಭಾನುವಾರ 19.1.1997

Last Updated 18 ಜನವರಿ 2022, 15:07 IST
ಅಕ್ಷರ ಗಾತ್ರ

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಏರಿಕೆ

ಬೆಂಗಳೂರು, ಜ.18– ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬಸ್‌ ಪ್ರಯಾಣ ದರ ಏರಿಸಲು ಸರ್ಕಾರ ನಿರ್ಧರಿಸಿದೆ. ಏರಿಕೆಯಾಗುವ ನಿಖರವಾದ ದರ ಪ್ರಮಾಣವನ್ನು ಹದಿನೈದು ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಅವರು ಇಂದು ಇಲ್ಲಿ ತಿಳಿಸಿದರು.

ನೀರಾವರಿ ಶುಲ್ಕ ವಿಧಿಸುವ ಇಂಗಿತವನ್ನೂ ಅವರು ವ್ಯಕ್ತಪಡಿಸಿದರು.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಆರ್ಥಿಕ ಪರಿಸ್ಥಿತಿ ಪರಿಶೀಲಿಸಲು ರಚಿಸಿದ್ದ ಸಂಪುಟ ಉಪ ಸಮಿತಿಯ ಶಿಫಾರಸಿನ ಮೇಲೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಸುದ್ದಿಗಾರರಿಗೆ ಹೇಳಿದರು.

ಸಂಪುಟ ಉಪ ಸಮಿತಿ ನೀಡಿರುವ ವರದಿಯನ್ನು ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ. ನಷ್ಟದಲ್ಲಿ ನಡೆಯುತ್ತಿರುವ ಸಾರಿಗೆ ಸಂಸ್ಥೆಯನ್ನು ಉಳಿಸಲು ದರ ಏರಿಸದೆ ಬೇರೆ
ಮಾರ್ಗವೇ ಇಲ್ಲ ಎಂದು ಅವರು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT