ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಸೋಮವಾರ, 19–5–1997

Last Updated 18 ಮೇ 2022, 19:45 IST
ಅಕ್ಷರ ಗಾತ್ರ

ತುಂಗಾ ನದಿ ಮೇಲ್ದಂಡೆ ನಿರ್ಮಾಣ ನಿಲ್ಲದು: ಪಟೇಲ್‌

ಬಳ್ಳಾರಿ, ಮೇ 18– ತುಂಗಾ ಮೇಲ್ದಂಡೆ ಯೋಜನೆಗಳ ಕಾಮಗಾರಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಅವರು ಇಂದು ಇಲ್ಲಿ ಸ್ಪಷ್ಟಪಡಿಸಿದರು.

ತುಂಗಾ ಮೇಲ್ದಂಡೆ ಯೋಜನೆಯ ಜೊತೆಗೆ ಭದ್ರಾ ಹಾಗೂ ತುಂಗಾ ಹೊರಳು ಯೋಜನೆಗಳ ಕಾಮಗಾರಿಯನ್ನೂ ರಾಜ್ಯ ಸರ್ಕಾರ ಶೀಘ್ರವೇ ಕೈಗೆತ್ತಿಕೊಳ್ಳಲಿದ್ದು ಇವುಗಳಿಗೆ ಕೇಂದ್ರದ ಪರವಾನಗಿ ಪಡೆಯುವ ಅಗತ್ಯವೇನಿಲ್ಲವೆಂದು ಅವರು ಸ್ಪಷ್ಟಪಡಿಸಿದರು.

ತೀರ್ಪು ಉಲ್ಲಂಘನೆ: ಕರ್ನಾಟಕದ ವಿರುದ್ಧ ಕ್ರಮ– ನಾಯ್ಡು

ಹೈದರಾಬಾದ್‌, ಮೇ 18 (ಯುಎನ್‌ಐ)– ಸತತವಾಗಿ ಬಚಾವತ್‌ ಆಯೋಗದ ತೀರ್ಪನ್ನು ಉಲ್ಲಂಘನೆ ಮಾಡುತ್ತಿರುವ ಕರ್ನಾಟಕದ ವಿರುದ್ಧ ಇನ್ನು ಕೆಲವೇ ದಿನಗಳಲ್ಲಿ ತಮ್ಮ ಸರ್ಕಾರ ವ್ಯವಸ್ಥಿತ ಕ್ರಮ ಕೈಗೊಳ್ಳಲಿದೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇಂದು ಇಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT