ಮೈಸೂರು, ಸೆಪ್ಟೆಂಬರ್ 17– ಕಾವೇರಿ ಜಲವಿವಾದದ ಸಂಬಂಧದಲ್ಲಿ ಸಂಬಂಧಿಸಿದ ಮೂವರು ಮುಖ್ಯಮಂತ್ರಿಗಳು ಸಭೆ ಸೇರಿ ವಿಷಯ ಸಂಗ್ರಹಣೆಗೆ ತಾಂತ್ರಿಕ ಸಮಿತಿ ನೇಮಕ ಮಾಡಿದ ಬಗ್ಗೆ ಇಂದು ಇಲ್ಲಿ ಪ್ರಸ್ತಾಪಿಸಿದ ಎಂ.ಪಿ.ಸಿ.ಸಿ. (ಸಂಸ್ಥಾ) ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಬಲವಾದ ಶಂಕೆ ವ್ಯಕ್ತಪಡಿಸಿ, ‘ಏನೋ ಒಳಸಂಚು ನಡೆದಿದೆ’ ಎಂದು ಆರೋಪಿಸಿದರು.