<p><strong>ನವದೆಹಲಿ, ಆ. 14–</strong> ಇತ್ತೀಚಿನ ವರ್ಷಗಳ ಶಾಸನಸಭೆ ಚುನಾವಣೆಗಳಲ್ಲಿ ಹಣದ ಬಲ ಪ್ರಧಾನ ಪಾತ್ರ ವಹಿಸುತ್ತಿರುವ ಬಗ್ಗೆ ರಾಷ್ಟ್ರಪತಿ ವಿ.ವಿ. ಗಿರಿ ಅವರು ಎಚ್ಚರಿಕೆ ನೀಡಿದ್ದಾರೆ.</p><p>ಇಪ್ಪತ್ತೇಳನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ರಾಷ್ಟ್ರಕ್ಕೆ ನೀಡಿರುವ ಸಂದೇಶದಲ್ಲಿ ಈ ಎಚ್ಚರಿಕೆ ನೀಡಿರುವ ಗಿರಿಯವರು, ಸಂಯುಕ್ತ ಸಮಾಲೋಚನೆ ಮೂಲಕ ಈ ಪರಿಸ್ಥಿತಿ ನಿವಾರಿಸುವಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರಿಗೆ ಕರೆ ಕೊಟ್ಟಿದ್ದಾರೆ.</p><p>ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸದೇ ಹೋದರೆ, ಜನತೆ ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ನಂಬಿಕೆ ಕಳೆದುಕೊಳ್ಳುವರೆಂದು ಅವರು ತಿಳಿಸಿದ್ದಾರೆ.</p><p>ಚುನಾವಣೆಗಳಲ್ಲಿ ಪ್ರಧಾನ ಪಾತ್ರ ವಹಿಸಿರುವ ಈ ಧನಬಲ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಜೀವನದಲ್ಲಿನ ಭ್ರಷ್ಟ ಪ್ರಭಾವಗಳ ಮೂಲವಾಗಿದೆ ಎಂದು ತಿಳಿಸಿರುವ ಗಿರಿಯವರು, ಭಯ ಭೀತಿಗಳಿಲ್ಲದೆ ಮುಕ್ತ ರೀತಿಯಲ್ಲಿ ವಯಸ್ಕರ ಮತದಾನ ನಡೆಯುವುದೇ ಸರ್ಕಾರ ಜವಾಬ್ದಾರಿಯಿಂದ ವರ್ತಿಸಿ ಜನರ ಆಶೋತ್ತರಗಳನ್ನು ಈಡೇರಿಸುವುದಕ್ಕೆ ಉತ್ತಮ ಸಾಧನ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, ಆ. 14–</strong> ಇತ್ತೀಚಿನ ವರ್ಷಗಳ ಶಾಸನಸಭೆ ಚುನಾವಣೆಗಳಲ್ಲಿ ಹಣದ ಬಲ ಪ್ರಧಾನ ಪಾತ್ರ ವಹಿಸುತ್ತಿರುವ ಬಗ್ಗೆ ರಾಷ್ಟ್ರಪತಿ ವಿ.ವಿ. ಗಿರಿ ಅವರು ಎಚ್ಚರಿಕೆ ನೀಡಿದ್ದಾರೆ.</p><p>ಇಪ್ಪತ್ತೇಳನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ರಾಷ್ಟ್ರಕ್ಕೆ ನೀಡಿರುವ ಸಂದೇಶದಲ್ಲಿ ಈ ಎಚ್ಚರಿಕೆ ನೀಡಿರುವ ಗಿರಿಯವರು, ಸಂಯುಕ್ತ ಸಮಾಲೋಚನೆ ಮೂಲಕ ಈ ಪರಿಸ್ಥಿತಿ ನಿವಾರಿಸುವಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರಿಗೆ ಕರೆ ಕೊಟ್ಟಿದ್ದಾರೆ.</p><p>ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸದೇ ಹೋದರೆ, ಜನತೆ ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ನಂಬಿಕೆ ಕಳೆದುಕೊಳ್ಳುವರೆಂದು ಅವರು ತಿಳಿಸಿದ್ದಾರೆ.</p><p>ಚುನಾವಣೆಗಳಲ್ಲಿ ಪ್ರಧಾನ ಪಾತ್ರ ವಹಿಸಿರುವ ಈ ಧನಬಲ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಜೀವನದಲ್ಲಿನ ಭ್ರಷ್ಟ ಪ್ರಭಾವಗಳ ಮೂಲವಾಗಿದೆ ಎಂದು ತಿಳಿಸಿರುವ ಗಿರಿಯವರು, ಭಯ ಭೀತಿಗಳಿಲ್ಲದೆ ಮುಕ್ತ ರೀತಿಯಲ್ಲಿ ವಯಸ್ಕರ ಮತದಾನ ನಡೆಯುವುದೇ ಸರ್ಕಾರ ಜವಾಬ್ದಾರಿಯಿಂದ ವರ್ತಿಸಿ ಜನರ ಆಶೋತ್ತರಗಳನ್ನು ಈಡೇರಿಸುವುದಕ್ಕೆ ಉತ್ತಮ ಸಾಧನ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>