<p><strong>ರಾಣೆಬೆನ್ನೂರು ಉದ್ರಿಕ್ತ ಗಾಳಿಯಲ್ಲಿ ಗುಂಡು</strong> </p><p><strong>ರಾಣೆಬೆನ್ನೂರು, ನ. 11–</strong> ರಾಣೆಬೆನ್ನೂರು ಪಟ್ಟಣದ ಸ್ಮಶಾನ ಭೂಮಿಯ ಬಗ್ಗೆ ಇಲ್ಲಿನ ಎರಡು ಸಮುದಾಯಗಳ ನಡುವೆ ಇರುವ ಹಳೆಯ ವಿವಾದ ಇಂದು ಘರ್ಷಣೆಗೆ ದಾರಿ ಮಾಡಿಕೊಟ್ಟಿದ್ದು, ಸಾರ್ವಜನಿಕ ಆಸ್ತಿಪಾಸ್ತಿ ನಾಶಗೊಳಿಸಿ ಕಲ್ಲೆಸೆತದಲ್ಲಿ ತೊಡಗಿದ್ದ ಗುಂಪುಗಳನ್ನು ಚದುರಿಸಲು ಪೊಲೀಸರು, ನಾಲ್ಕು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು.</p><p>ರಾತ್ರಿ 10 ಗಂಟೆಯಲ್ಲೂ ಉದ್ರಿಕ್ತ ಜನರು ಅಲ್ಲಲ್ಲಿ ವಾಹನಗಳು ಹಾಗೂ ಅಂಗಡಿಗಳಿಗೆ ಕಲ್ಲೆಸೆಯುತ್ತಿದ್ದರು. ಪಟ್ಟಣದಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಹಿಂಸಾಚಾರದಲ್ಲಿ ತೊಡಗಿರುವ ಜನರನ್ನು ಚದುರಿಸಿದರು.</p><p>______________________________</p>.<p><strong>ಆಪಾದಿತ ಕೇಂದ್ರ ಸಚಿವ ರಾಜೀನಾಮೆ</strong></p><p><strong>ನವದೆಹಲಿ, ನ. 11 (ಯುಎನ್ಐ)</strong>– ಕೊಲೆ ಆರೋಪ ಎದುರಿಸುತ್ತಿರುವ ಕೇಂದ್ರ ರಕ್ಷಣಾ ಖಾತೆಯ ರಾಜ್ಯ ಸಚಿವ ಹಿರೇನ್ ಪಾಠಕ್ ಇಂದು ರಾತ್ರಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.</p><p>1985ರ ಮೀಸಲಾತಿ ವಿರೋಧಿ ಗಲಭೆ ಸಂದರ್ಭದಲ್ಲಿ ಹೆಡ್ ಕಾನ್ಸ್ಟೆಬಲ್ ಒಬ್ಬರನ್ನು ಹತ್ಯೆ ಮಾಡಿರುವ ಸಂಬಂಧ ಅಹಮದಾಬಾದ್ನ ಕೋರ್ಟಿನಲ್ಲಿ ಪಾಠಕ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು ಉದ್ರಿಕ್ತ ಗಾಳಿಯಲ್ಲಿ ಗುಂಡು</strong> </p><p><strong>ರಾಣೆಬೆನ್ನೂರು, ನ. 11–</strong> ರಾಣೆಬೆನ್ನೂರು ಪಟ್ಟಣದ ಸ್ಮಶಾನ ಭೂಮಿಯ ಬಗ್ಗೆ ಇಲ್ಲಿನ ಎರಡು ಸಮುದಾಯಗಳ ನಡುವೆ ಇರುವ ಹಳೆಯ ವಿವಾದ ಇಂದು ಘರ್ಷಣೆಗೆ ದಾರಿ ಮಾಡಿಕೊಟ್ಟಿದ್ದು, ಸಾರ್ವಜನಿಕ ಆಸ್ತಿಪಾಸ್ತಿ ನಾಶಗೊಳಿಸಿ ಕಲ್ಲೆಸೆತದಲ್ಲಿ ತೊಡಗಿದ್ದ ಗುಂಪುಗಳನ್ನು ಚದುರಿಸಲು ಪೊಲೀಸರು, ನಾಲ್ಕು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು.</p><p>ರಾತ್ರಿ 10 ಗಂಟೆಯಲ್ಲೂ ಉದ್ರಿಕ್ತ ಜನರು ಅಲ್ಲಲ್ಲಿ ವಾಹನಗಳು ಹಾಗೂ ಅಂಗಡಿಗಳಿಗೆ ಕಲ್ಲೆಸೆಯುತ್ತಿದ್ದರು. ಪಟ್ಟಣದಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಹಿಂಸಾಚಾರದಲ್ಲಿ ತೊಡಗಿರುವ ಜನರನ್ನು ಚದುರಿಸಿದರು.</p><p>______________________________</p>.<p><strong>ಆಪಾದಿತ ಕೇಂದ್ರ ಸಚಿವ ರಾಜೀನಾಮೆ</strong></p><p><strong>ನವದೆಹಲಿ, ನ. 11 (ಯುಎನ್ಐ)</strong>– ಕೊಲೆ ಆರೋಪ ಎದುರಿಸುತ್ತಿರುವ ಕೇಂದ್ರ ರಕ್ಷಣಾ ಖಾತೆಯ ರಾಜ್ಯ ಸಚಿವ ಹಿರೇನ್ ಪಾಠಕ್ ಇಂದು ರಾತ್ರಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.</p><p>1985ರ ಮೀಸಲಾತಿ ವಿರೋಧಿ ಗಲಭೆ ಸಂದರ್ಭದಲ್ಲಿ ಹೆಡ್ ಕಾನ್ಸ್ಟೆಬಲ್ ಒಬ್ಬರನ್ನು ಹತ್ಯೆ ಮಾಡಿರುವ ಸಂಬಂಧ ಅಹಮದಾಬಾದ್ನ ಕೋರ್ಟಿನಲ್ಲಿ ಪಾಠಕ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>