<p><strong>ಗ್ರಾಮೀಣ ಅಭ್ಯರ್ಥಿಗಳಿಗೆ ಶೇ 5ರಷ್ಟು ಹುದ್ದೆ ಮೀಸಲು</strong></p>.<p><strong>ಬೆಂಗಳೂರು, ಸೆಪ್ಟೆಂಬರ್ 15</strong>– ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಪಾಂಕದ ಬದಲಾಗಿ ನೇಮಕಾತಿಯಲ್ಲಿ <br>ಶೇ 5ರಷ್ಟು ಹುದ್ದೆಗಳ ಪ್ರತ್ಯೇಕ ಮೀಸಲಾತಿ ನೀಡುವಂತೆ ನ್ಯಾಯಮೂರ್ತಿ ಆರ್. ರಾಮಕೃಷ್ಣ ನೇತೃತ್ವದ ಆಯೋಗ ಶಿಫಾರಸು ಮಾಡಿದೆ.</p>.<p>ಕೃಪಾಂಕ ಪದ್ಧತಿಯನ್ನು ಹೈಕೋರ್ಟ್ ರದ್ದುಪಡಿಸಿದ್ದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ಆಯೋಗ ನೇಮಿಸಿತ್ತು. </p>.<p><strong>ಅಮೆರಿಕ ಜತೆ 5 ಒಪ್ಪಂದಕ್ಕೆ ಸಹಿ</strong></p>.<p><strong>ವಾಷಿಂಗ್ಟನ್, ಸೆಪ್ಟೆಂಬರ್ 15 (ಪಿಟಿಐ)–</strong> ದ್ವಿಪಕ್ಷೀಯ ಆರ್ಥಿಕ ಬಾಂಧವ್ಯ ಹೆಚ್ಚಳಕ್ಕಾಗಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಭೇಟಿ ಸಂದರ್ಭದಲ್ಲಿ 6 ಶತಕೋಟಿ ಡಾಲರ್ ಮೌಲ್ಯದ 5 ವಾಣಿಜ್ಯ ಒಪ್ಪಂದಗಳಿಗೆ ಭಾರತ–ಅಮೆರಿಕ ಸಹಿ ಹಾಕಿವೆ.</p>.<p>ಹಣಕಾಸು ಸಚಿವ ಯಶವಂತ ಸಿನ್ಹಾ ಹಾಗೂ ಅಮೆರಿಕ ವಾಣಿಜ್ಯ ಕಾರ್ಯದರ್ಶಿ ನಾರ್ಮನ್ ವೈ ಮಿನೆಟಾ ಹಾಜರಿಯಲ್ಲಿ ಸಹಿ ಹಾಕಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗ್ರಾಮೀಣ ಅಭ್ಯರ್ಥಿಗಳಿಗೆ ಶೇ 5ರಷ್ಟು ಹುದ್ದೆ ಮೀಸಲು</strong></p>.<p><strong>ಬೆಂಗಳೂರು, ಸೆಪ್ಟೆಂಬರ್ 15</strong>– ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಪಾಂಕದ ಬದಲಾಗಿ ನೇಮಕಾತಿಯಲ್ಲಿ <br>ಶೇ 5ರಷ್ಟು ಹುದ್ದೆಗಳ ಪ್ರತ್ಯೇಕ ಮೀಸಲಾತಿ ನೀಡುವಂತೆ ನ್ಯಾಯಮೂರ್ತಿ ಆರ್. ರಾಮಕೃಷ್ಣ ನೇತೃತ್ವದ ಆಯೋಗ ಶಿಫಾರಸು ಮಾಡಿದೆ.</p>.<p>ಕೃಪಾಂಕ ಪದ್ಧತಿಯನ್ನು ಹೈಕೋರ್ಟ್ ರದ್ದುಪಡಿಸಿದ್ದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ಆಯೋಗ ನೇಮಿಸಿತ್ತು. </p>.<p><strong>ಅಮೆರಿಕ ಜತೆ 5 ಒಪ್ಪಂದಕ್ಕೆ ಸಹಿ</strong></p>.<p><strong>ವಾಷಿಂಗ್ಟನ್, ಸೆಪ್ಟೆಂಬರ್ 15 (ಪಿಟಿಐ)–</strong> ದ್ವಿಪಕ್ಷೀಯ ಆರ್ಥಿಕ ಬಾಂಧವ್ಯ ಹೆಚ್ಚಳಕ್ಕಾಗಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಭೇಟಿ ಸಂದರ್ಭದಲ್ಲಿ 6 ಶತಕೋಟಿ ಡಾಲರ್ ಮೌಲ್ಯದ 5 ವಾಣಿಜ್ಯ ಒಪ್ಪಂದಗಳಿಗೆ ಭಾರತ–ಅಮೆರಿಕ ಸಹಿ ಹಾಕಿವೆ.</p>.<p>ಹಣಕಾಸು ಸಚಿವ ಯಶವಂತ ಸಿನ್ಹಾ ಹಾಗೂ ಅಮೆರಿಕ ವಾಣಿಜ್ಯ ಕಾರ್ಯದರ್ಶಿ ನಾರ್ಮನ್ ವೈ ಮಿನೆಟಾ ಹಾಜರಿಯಲ್ಲಿ ಸಹಿ ಹಾಕಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>