<p><strong>ಕೊಲಂಬೊ, ಸೆಪ್ಟೆಂಬರ್ 4 (ಪಿಟಿಐ)–</strong> ಶ್ರೀಲಂಕಾ ಸೈನಿಕರು ಹಾಗೂ ಎಲ್ಟಿಟಿಇ ಉಗ್ರರ ನಡುವೆ ಇಂದು ನಡೆದ ಭೀಕರ ಕದನದಲ್ಲಿ 114 ಮಂದಿ ಸೈನಿಕರು ಹಾಗೂ 230 ಮಂದಿ ಉಗ್ರರು ಸೇರಿದಂತೆ 344 ಮಂದಿ ಹತ್ಯೆಗೀಡಾಗಿದ್ದಾರೆ.</p><p>ಈ ಕದನದಲ್ಲಿ ಒಟ್ಟು 1,100 ಮಂದಿ ಗಾಯಗೊಂಡಿದ್ದಾರೆ. ಶ್ರೀಲಂಕಾದಲ್ಲಿ ಅಕ್ಟೋಬರ್ 10ರಂದು ನಡೆಯುವ ಸಂಸದೀಯ ಚುನಾವಣೆ ಹಿನ್ನೆಲೆಯಲ್ಲಿ ಎಲ್ಟಿಟಿಇ ಉಗ್ರರನ್ನು ಉತ್ತರ ಜಾಫ್ನಾದಿಂದ ಹೊರದಬ್ಬಲು ಸೈನಿಕರು ನಡೆಸಿದ ಕಾರ್ಯಾಚರಣೆಯಲ್ಲಿ 230 ಉಗ್ರಗಾಮಿಗಳು ಮೃತಪಟ್ಟಿದ್ದಾರೆ.</p>.<p><strong>ಇತರ ಹಿಂದುಳಿದ ಜಾತಿಗಳ ಪಟ್ಟಿಗೆ ಇನ್ನಷ್ಟು ಸೇರ್ಪಡೆ</strong></p><p><strong>ನವದೆಹಲಿ, ಸೆಪ್ಟೆಂಬರ್ 4 (ಪಿಟಿಐ)</strong>– ಕರ್ನಾಟಕವೂ ಸೇರಿದಂತೆ 13 ರಾಜ್ಯಗಳಿಗೆ ಅನ್ವಯವಾಗುವ ಕೇಂದ್ರ ಸರ್ಕಾರದ ಇತರ ಹಿಂದುಳಿದ ಜಾತಿಗಳ ಪಟ್ಟಿಗೆ ಇನ್ನಷ್ಟು ಜಾತಿಗಳನ್ನು ಸೇರಿಸಲು ಇಂದು ಕೇಂದ್ರ ಸಚಿವ ಸಂಪುಟ ನಿರ್ಧರಿಸಿತು.</p><p>ಹಿಂದುಳಿದ ಜಾತಿಗಳ ರಾಷ್ಟ್ರೀಯ ಆಯೋಗ ಸಲ್ಲಿಸಿರುವ 51 ಸಲಹೆಗಳನ್ನು ಒಪ್ಪಿಕೊಳ್ಳಲಾಗಿದೆ ಎಂದು ತಿಳಿಸಿದ ಸರ್ಕಾರದ ವಕ್ತಾರರು, ಹೊಸದಾಗಿ ಸೇರಿಸಿರುವ ಜಾತಿಗಳ ಹೆಸರುಗಳನ್ನು ನೀಡಲು ನಿರಾಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ, ಸೆಪ್ಟೆಂಬರ್ 4 (ಪಿಟಿಐ)–</strong> ಶ್ರೀಲಂಕಾ ಸೈನಿಕರು ಹಾಗೂ ಎಲ್ಟಿಟಿಇ ಉಗ್ರರ ನಡುವೆ ಇಂದು ನಡೆದ ಭೀಕರ ಕದನದಲ್ಲಿ 114 ಮಂದಿ ಸೈನಿಕರು ಹಾಗೂ 230 ಮಂದಿ ಉಗ್ರರು ಸೇರಿದಂತೆ 344 ಮಂದಿ ಹತ್ಯೆಗೀಡಾಗಿದ್ದಾರೆ.</p><p>ಈ ಕದನದಲ್ಲಿ ಒಟ್ಟು 1,100 ಮಂದಿ ಗಾಯಗೊಂಡಿದ್ದಾರೆ. ಶ್ರೀಲಂಕಾದಲ್ಲಿ ಅಕ್ಟೋಬರ್ 10ರಂದು ನಡೆಯುವ ಸಂಸದೀಯ ಚುನಾವಣೆ ಹಿನ್ನೆಲೆಯಲ್ಲಿ ಎಲ್ಟಿಟಿಇ ಉಗ್ರರನ್ನು ಉತ್ತರ ಜಾಫ್ನಾದಿಂದ ಹೊರದಬ್ಬಲು ಸೈನಿಕರು ನಡೆಸಿದ ಕಾರ್ಯಾಚರಣೆಯಲ್ಲಿ 230 ಉಗ್ರಗಾಮಿಗಳು ಮೃತಪಟ್ಟಿದ್ದಾರೆ.</p>.<p><strong>ಇತರ ಹಿಂದುಳಿದ ಜಾತಿಗಳ ಪಟ್ಟಿಗೆ ಇನ್ನಷ್ಟು ಸೇರ್ಪಡೆ</strong></p><p><strong>ನವದೆಹಲಿ, ಸೆಪ್ಟೆಂಬರ್ 4 (ಪಿಟಿಐ)</strong>– ಕರ್ನಾಟಕವೂ ಸೇರಿದಂತೆ 13 ರಾಜ್ಯಗಳಿಗೆ ಅನ್ವಯವಾಗುವ ಕೇಂದ್ರ ಸರ್ಕಾರದ ಇತರ ಹಿಂದುಳಿದ ಜಾತಿಗಳ ಪಟ್ಟಿಗೆ ಇನ್ನಷ್ಟು ಜಾತಿಗಳನ್ನು ಸೇರಿಸಲು ಇಂದು ಕೇಂದ್ರ ಸಚಿವ ಸಂಪುಟ ನಿರ್ಧರಿಸಿತು.</p><p>ಹಿಂದುಳಿದ ಜಾತಿಗಳ ರಾಷ್ಟ್ರೀಯ ಆಯೋಗ ಸಲ್ಲಿಸಿರುವ 51 ಸಲಹೆಗಳನ್ನು ಒಪ್ಪಿಕೊಳ್ಳಲಾಗಿದೆ ಎಂದು ತಿಳಿಸಿದ ಸರ್ಕಾರದ ವಕ್ತಾರರು, ಹೊಸದಾಗಿ ಸೇರಿಸಿರುವ ಜಾತಿಗಳ ಹೆಸರುಗಳನ್ನು ನೀಡಲು ನಿರಾಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>